<p><strong>ಬೆಂಗಳೂರು: </strong>ನಗರದ ಹೃದಯ ಭಾಗದಲ್ಲಿರುವ ಓಕಳಿಪುರ ಬಳಿ ಬಿಬಿಎಂಪಿ ಕೈಗೊಂಡಿರುವ ನಾಲ್ಕು ಪಥದ ಅಂಡರ್ಪಾಸ್ ನಿರ್ಮಾಣ ಕಾಮಗಾರಿಗೆ ಸಚಿವ ಎಸ್. ಸುರೇಶ್ಕುಮಾರ್ ಸೋಮವಾರ ಚಾಲನೆ ನೀಡಿದರು.<br /> <br /> ಸುಮಾರು 10.62 ಕೋಟಿ ರೂಪಾಯಿ ವೆಚ್ಚದಲ್ಲಿ 240 ಮೀಟರ್ ಉದ್ದದ ಅಂಡರ್ಪಾಸ್ ನಿರ್ಮಾಣವಾಗಲಿದೆ. ಎಲಿಮೆಂಟ್ ಬಳಸಿ ನಿರ್ಮಾಣವಾಗಲಿರುವ ಅಂಡರ್ಪಾಸ್ನ ಎರಡೂ ಬದಿಯಲ್ಲಿ ರ್ಯಾಂಪ್ಗಳು ತಲೆಯೆತ್ತಲಿವೆ ಎಂದು ಸಚಿವರ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.<br /> <br /> ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸುರೇಶ್ಕುಮಾರ್, `ಓಕಳಿಪುರ ಕಡೆಯಿಂದ ಬರುವ ವಾಹನಗಳು ಸಂಚಾರ ದಟ್ಟಣೆಯಿಲ್ಲದೇ ನೇರವಾಗಿ ಮಾಗಡಿ ರಸ್ತೆ ಕಡೆಗೆ ಹೋಗುವ ವ್ಯವಸ್ಥೆ ಮಾಡಲಾಗಿದೆ. 90 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಸದ್ಯದ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕಾಮಗಾರಿ ನಡೆಯಲಿದೆ~ ಎಂದರು.<br /> <br /> `ಓಕಳಿಪುರ ವೃತ್ತದಲ್ಲಿ ಸಿಗ್ನಲ್ಮುಕ್ತ ಕಾರಿಡಾರ್ ನಿರ್ಮಾಣಕ್ಕೆ ಅಂತಿಮ ರೂಪ ನೀಡಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆಯಲು ಹಾಗೂ ರೈಲ್ವೆ ಇಲಾಖೆಗೆ ಬದಲಿ ಸ್ಥಳ ನೀಡಿಕೆಗೆ ಸಂಬಂಧಪಟ್ಟಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. <br /> <br /> ಪಾಲಿಕೆಯ ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಪಡೆದು ಡಿಸೆಂಬರ್ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು~ ಎಂದು ಹೇಳಿದರು. ಶಾಸಕ ದಿನೇಶ್ ಗುಂಡೂರಾವ್, ಸ್ಥಳೀಯ ಪಾಲಿಕೆ ಸದಸ್ಯೆ ಕ್ವೀನ್ ಎಲಿಜಬೆತ್ ಇತರರು ಉಪಸ್ಥಿತರಿದ್ದರು.<br /> <br /> <strong>ಅಧಿಕೃತ ಕಾರ್ಯಕ್ರಮವಲ್ಲ?</strong><br /> ಓಕಳಿಪುರ ಬಳಿ ಅಂಡರ್ಪಾಸ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುವ ಸಂಬಂಧ ಸೋಮವಾರ ಯಾವುದೇ ಅಧಿಕೃತ ಕಾರ್ಯಕ್ರಮ ಆಯೋಜನೆಯಾಗಿರಲಿಲ್ಲ. ಕಾಮಗಾರಿ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಗೆ ಸೇರಿದ 13 ಗುಂಟೆ ಪ್ರದೇಶವನ್ನು ವಶಕ್ಕೆ ಪಡೆಯಬೇಕಿತ್ತು.<br /> <br /> ಈ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಔಪಚಾರಿಕವಾಗಿ ಸಚಿವರು ಹಾಗೂ ಸ್ಥಳೀಯ ಶಾಸಕರಿಗೆ ಆಹ್ವಾನವನ್ನು ನೀಡಲಾಗಿತ್ತು.<br /> <br /> ರೈಲ್ವೆ ಇಲಾಖೆಯ ಗೋಡೆ ತೆರವಿಗೆ ಮುಂದಾದ ಗುತ್ತಿಗೆದಾರರು ಸಾಂಕೇತಿಕವಾಗಿ ಪೂಜಾ ಕಾರ್ಯ ನಡೆಸಿದ್ದರು. ಇದನ್ನೇ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂಬುದಾಗಿ ಬಿಂಬಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.<br /> ಏಕೆಂದರೆ ಈ ಕಾರ್ಯಕ್ಕೆ ಮೇಯರ್ ಪಿ. ಶಾರದಮ್ಮ ಹಾಗೂ ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರು ಸೇರಿದಂತೆ ಇತರರಿಗೆ ಆಹ್ವಾನವಿರಲಿಲ್ಲ.<br /> <br /> `ರೈಲ್ವೆ ಇಲಾಖೆಯ ಕಾಂಪೌಂಡ್ ತೆರವು ಕಾರ್ಯಾಚರಣೆ ಆರಂಭವಾಗಿದೆಯೇ ಹೊರತು, ಅಂಡರ್ಪಾಸ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿರಲಿಲ್ಲ~ ಎಂದು ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎಚ್. ರಾಮಚಂದ್ರ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> <strong>ನವೆಂಬರ್ನಲ್ಲಿ ಆರಂಭ:</strong> `ಓಕಳಿಪುರ ಬಳಿ ಒಟ್ಟು 240 ಮೀಟರ್ ಉದ್ದದ ಅಂಡರ್ಪಾಸ್ ನಿರ್ಮಾಣವಾಗಲಿದೆ. ಸದ್ಯ ಕಾಂಪೌಂಡ್ ತೆರವು ಕಾರ್ಯ ಆರಂಭವಾಗಿದೆ. ಸರ್ವಿಸ್ ರಸ್ತೆ ನಿರ್ಮಿಸಿದ ಬಳಿಕ ಸಂಚಾರ ಬದಲಾವಣೆ ಮಾಡಿ ನಂತರ ಅಂಡರ್ಪಾಸ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.<br /> <br /> ನವೆಂಬರ್ ಮೊದಲ ವಾರದಲ್ಲಿ ಕಾಮಗಾರಿ ಆರಂಭಿಸಲು ಉದ್ದೇಶಿಸಲಾಗಿದೆ~ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಹೃದಯ ಭಾಗದಲ್ಲಿರುವ ಓಕಳಿಪುರ ಬಳಿ ಬಿಬಿಎಂಪಿ ಕೈಗೊಂಡಿರುವ ನಾಲ್ಕು ಪಥದ ಅಂಡರ್ಪಾಸ್ ನಿರ್ಮಾಣ ಕಾಮಗಾರಿಗೆ ಸಚಿವ ಎಸ್. ಸುರೇಶ್ಕುಮಾರ್ ಸೋಮವಾರ ಚಾಲನೆ ನೀಡಿದರು.<br /> <br /> ಸುಮಾರು 10.62 ಕೋಟಿ ರೂಪಾಯಿ ವೆಚ್ಚದಲ್ಲಿ 240 ಮೀಟರ್ ಉದ್ದದ ಅಂಡರ್ಪಾಸ್ ನಿರ್ಮಾಣವಾಗಲಿದೆ. ಎಲಿಮೆಂಟ್ ಬಳಸಿ ನಿರ್ಮಾಣವಾಗಲಿರುವ ಅಂಡರ್ಪಾಸ್ನ ಎರಡೂ ಬದಿಯಲ್ಲಿ ರ್ಯಾಂಪ್ಗಳು ತಲೆಯೆತ್ತಲಿವೆ ಎಂದು ಸಚಿವರ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.<br /> <br /> ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸುರೇಶ್ಕುಮಾರ್, `ಓಕಳಿಪುರ ಕಡೆಯಿಂದ ಬರುವ ವಾಹನಗಳು ಸಂಚಾರ ದಟ್ಟಣೆಯಿಲ್ಲದೇ ನೇರವಾಗಿ ಮಾಗಡಿ ರಸ್ತೆ ಕಡೆಗೆ ಹೋಗುವ ವ್ಯವಸ್ಥೆ ಮಾಡಲಾಗಿದೆ. 90 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಸದ್ಯದ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕಾಮಗಾರಿ ನಡೆಯಲಿದೆ~ ಎಂದರು.<br /> <br /> `ಓಕಳಿಪುರ ವೃತ್ತದಲ್ಲಿ ಸಿಗ್ನಲ್ಮುಕ್ತ ಕಾರಿಡಾರ್ ನಿರ್ಮಾಣಕ್ಕೆ ಅಂತಿಮ ರೂಪ ನೀಡಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆಡಳಿತಾತ್ಮಕ ಅನುಮೋದನೆ ಪಡೆಯಲು ಹಾಗೂ ರೈಲ್ವೆ ಇಲಾಖೆಗೆ ಬದಲಿ ಸ್ಥಳ ನೀಡಿಕೆಗೆ ಸಂಬಂಧಪಟ್ಟಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. <br /> <br /> ಪಾಲಿಕೆಯ ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಪಡೆದು ಡಿಸೆಂಬರ್ ಮೊದಲ ವಾರದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು~ ಎಂದು ಹೇಳಿದರು. ಶಾಸಕ ದಿನೇಶ್ ಗುಂಡೂರಾವ್, ಸ್ಥಳೀಯ ಪಾಲಿಕೆ ಸದಸ್ಯೆ ಕ್ವೀನ್ ಎಲಿಜಬೆತ್ ಇತರರು ಉಪಸ್ಥಿತರಿದ್ದರು.<br /> <br /> <strong>ಅಧಿಕೃತ ಕಾರ್ಯಕ್ರಮವಲ್ಲ?</strong><br /> ಓಕಳಿಪುರ ಬಳಿ ಅಂಡರ್ಪಾಸ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುವ ಸಂಬಂಧ ಸೋಮವಾರ ಯಾವುದೇ ಅಧಿಕೃತ ಕಾರ್ಯಕ್ರಮ ಆಯೋಜನೆಯಾಗಿರಲಿಲ್ಲ. ಕಾಮಗಾರಿ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಗೆ ಸೇರಿದ 13 ಗುಂಟೆ ಪ್ರದೇಶವನ್ನು ವಶಕ್ಕೆ ಪಡೆಯಬೇಕಿತ್ತು.<br /> <br /> ಈ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಔಪಚಾರಿಕವಾಗಿ ಸಚಿವರು ಹಾಗೂ ಸ್ಥಳೀಯ ಶಾಸಕರಿಗೆ ಆಹ್ವಾನವನ್ನು ನೀಡಲಾಗಿತ್ತು.<br /> <br /> ರೈಲ್ವೆ ಇಲಾಖೆಯ ಗೋಡೆ ತೆರವಿಗೆ ಮುಂದಾದ ಗುತ್ತಿಗೆದಾರರು ಸಾಂಕೇತಿಕವಾಗಿ ಪೂಜಾ ಕಾರ್ಯ ನಡೆಸಿದ್ದರು. ಇದನ್ನೇ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂಬುದಾಗಿ ಬಿಂಬಿಸಿರುವುದು ಗೊಂದಲಕ್ಕೆ ಕಾರಣವಾಗಿದೆ.<br /> ಏಕೆಂದರೆ ಈ ಕಾರ್ಯಕ್ಕೆ ಮೇಯರ್ ಪಿ. ಶಾರದಮ್ಮ ಹಾಗೂ ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷರು ಸೇರಿದಂತೆ ಇತರರಿಗೆ ಆಹ್ವಾನವಿರಲಿಲ್ಲ.<br /> <br /> `ರೈಲ್ವೆ ಇಲಾಖೆಯ ಕಾಂಪೌಂಡ್ ತೆರವು ಕಾರ್ಯಾಚರಣೆ ಆರಂಭವಾಗಿದೆಯೇ ಹೊರತು, ಅಂಡರ್ಪಾಸ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿರಲಿಲ್ಲ~ ಎಂದು ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಎಚ್. ರಾಮಚಂದ್ರ ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> <strong>ನವೆಂಬರ್ನಲ್ಲಿ ಆರಂಭ:</strong> `ಓಕಳಿಪುರ ಬಳಿ ಒಟ್ಟು 240 ಮೀಟರ್ ಉದ್ದದ ಅಂಡರ್ಪಾಸ್ ನಿರ್ಮಾಣವಾಗಲಿದೆ. ಸದ್ಯ ಕಾಂಪೌಂಡ್ ತೆರವು ಕಾರ್ಯ ಆರಂಭವಾಗಿದೆ. ಸರ್ವಿಸ್ ರಸ್ತೆ ನಿರ್ಮಿಸಿದ ಬಳಿಕ ಸಂಚಾರ ಬದಲಾವಣೆ ಮಾಡಿ ನಂತರ ಅಂಡರ್ಪಾಸ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.<br /> <br /> ನವೆಂಬರ್ ಮೊದಲ ವಾರದಲ್ಲಿ ಕಾಮಗಾರಿ ಆರಂಭಿಸಲು ಉದ್ದೇಶಿಸಲಾಗಿದೆ~ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>