<p><strong>ರಾಯಚೂರು:</strong> ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ಅವರ 47ನೇ ಜನ್ಮದಿನವನ್ನು ಕರವೇ ಜಿಲ್ಲಾ ಘಟಕವು ಈ ಬಾರಿ ವಿಶೇಷವಾಗಿ ಆಚರಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆಯಿತು.<br /> <br /> ನಾರಾಯಣಗೌಡರ 47ನೇ ಜನ್ಮದಿನದ ಅಂಗವಾಗಿ ಕರವೇ ಸಂಘಟನೆ 47 ಕಾರ್ಯಕರ್ತರು ರಕ್ತದಾನ ಮಾಡಿದರು. ನಾರಾಯಣಗೌಡರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ಕರವೇ ಜಿಲ್ಲಾ ಘಟಕವು `ರಕ್ತದಾನ ಶಿಬಿರ'ವನ್ನು ಸೋಮವಾರ ಇಲ್ಲಿನ ಭಾರತೀಯ ವೈದ್ಯಕೀಯ ಸಂಘದ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಘ, ಸರ್ಕಾರಿ ವೈದ್ಯಕೀಯ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿತ್ತು.<br /> <br /> ರಕ್ತದಾನ ಶಿಬಿರ ಉದ್ಘಾಟಿಸಿದ ಸಾಹಿತಿ ಭಗತರಾಜ ನಿಜಾಮಕರ ಮಾತನಾಡಿ, ಎಲ್ಲ ದಾನಕ್ಕಿಂತ ರಕ್ತದಾನ ಮುಖ್ಯವಾಗಿದೆ. ರಕ್ತ ದೊರಕುವ ಸಮಸ್ಯೆ ಎಲ್ಲೆಡೆ ಇದೆ. ಒಬ್ಬ ಮನುಷ್ಯನ ಜೀವ ಉಳಿಸುವ ಕಾರ್ಯ ರಕ್ತದಾನ ಮಾಡಿದವರಿಂದ ಆಗುತ್ತದೆ ಎಂದು ಹೇಳಿದರು.<br /> <br /> ನಾಡು, ನುಡಿ, ಜನಪರ ಹೋರಾಟಗಳಲ್ಲಿ ಕರವೇ ಸಂಘಟನೆ ತೊಡಗಿಸಿಕೊಂಡು ಕೆಲಸ ಮಾಡುತ್ತಿದೆ. ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಕಾರ್ಯಗಳಾಗಲಿ ಎಂದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೆಂಕಟೇಶ ನಾಯಕ ಮಾತನಾಡಿ, ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ರಕ್ತದ ಕೊರತೆಯಿಂದ ಜನತೆ ತೊಂದರೆ ಪಡುತ್ತಿದ್ದಾರೆ. ಗ್ರಾಮ ಮತ್ತು ಹೋಬಳಿ ಮಟ್ಟದಲ್ಲಿ ರಕ್ತದಾನ ಶಿಬಿರಗಳಾದರೆ ಪ್ರಯೋಜನವಾಗುತ್ತದೆ ಎಂದು ತಿಳಿಸಿದರು.<br /> <br /> ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರು ಸಾನಿಧ್ಯವಹಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ವಿನೋದರೆಡ್ಡಿ ವಹಿಸಿದ್ದರು.<br /> <br /> ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಭಾಷ ಪಾಟೀಲ್ ಶಾವಂತಗೇರಾ, ಡಾ. ಬಸನಗೌಡ, ಡಾ.ಪ್ರಸನ್ನಕುಮಾರ, ಡಾ.ಸಿ.ಎನ್ ಕುಲಕರ್ಣಿ, ದಂಡಪ್ಪ ಬಿರಾದಾರ ಹಾಗೂ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ಅವರ 47ನೇ ಜನ್ಮದಿನವನ್ನು ಕರವೇ ಜಿಲ್ಲಾ ಘಟಕವು ಈ ಬಾರಿ ವಿಶೇಷವಾಗಿ ಆಚರಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆಯಿತು.<br /> <br /> ನಾರಾಯಣಗೌಡರ 47ನೇ ಜನ್ಮದಿನದ ಅಂಗವಾಗಿ ಕರವೇ ಸಂಘಟನೆ 47 ಕಾರ್ಯಕರ್ತರು ರಕ್ತದಾನ ಮಾಡಿದರು. ನಾರಾಯಣಗೌಡರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ಕರವೇ ಜಿಲ್ಲಾ ಘಟಕವು `ರಕ್ತದಾನ ಶಿಬಿರ'ವನ್ನು ಸೋಮವಾರ ಇಲ್ಲಿನ ಭಾರತೀಯ ವೈದ್ಯಕೀಯ ಸಂಘದ ಸಭಾಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಘ, ಸರ್ಕಾರಿ ವೈದ್ಯಕೀಯ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿತ್ತು.<br /> <br /> ರಕ್ತದಾನ ಶಿಬಿರ ಉದ್ಘಾಟಿಸಿದ ಸಾಹಿತಿ ಭಗತರಾಜ ನಿಜಾಮಕರ ಮಾತನಾಡಿ, ಎಲ್ಲ ದಾನಕ್ಕಿಂತ ರಕ್ತದಾನ ಮುಖ್ಯವಾಗಿದೆ. ರಕ್ತ ದೊರಕುವ ಸಮಸ್ಯೆ ಎಲ್ಲೆಡೆ ಇದೆ. ಒಬ್ಬ ಮನುಷ್ಯನ ಜೀವ ಉಳಿಸುವ ಕಾರ್ಯ ರಕ್ತದಾನ ಮಾಡಿದವರಿಂದ ಆಗುತ್ತದೆ ಎಂದು ಹೇಳಿದರು.<br /> <br /> ನಾಡು, ನುಡಿ, ಜನಪರ ಹೋರಾಟಗಳಲ್ಲಿ ಕರವೇ ಸಂಘಟನೆ ತೊಡಗಿಸಿಕೊಂಡು ಕೆಲಸ ಮಾಡುತ್ತಿದೆ. ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಕಾರ್ಯಗಳಾಗಲಿ ಎಂದರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೆಂಕಟೇಶ ನಾಯಕ ಮಾತನಾಡಿ, ಜಿಲ್ಲೆಯ ತಾಲ್ಲೂಕು ಮಟ್ಟದಲ್ಲಿ ರಕ್ತದ ಕೊರತೆಯಿಂದ ಜನತೆ ತೊಂದರೆ ಪಡುತ್ತಿದ್ದಾರೆ. ಗ್ರಾಮ ಮತ್ತು ಹೋಬಳಿ ಮಟ್ಟದಲ್ಲಿ ರಕ್ತದಾನ ಶಿಬಿರಗಳಾದರೆ ಪ್ರಯೋಜನವಾಗುತ್ತದೆ ಎಂದು ತಿಳಿಸಿದರು.<br /> <br /> ಕಿಲ್ಲೆ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರು ಸಾನಿಧ್ಯವಹಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ವಿನೋದರೆಡ್ಡಿ ವಹಿಸಿದ್ದರು.<br /> <br /> ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಭಾಷ ಪಾಟೀಲ್ ಶಾವಂತಗೇರಾ, ಡಾ. ಬಸನಗೌಡ, ಡಾ.ಪ್ರಸನ್ನಕುಮಾರ, ಡಾ.ಸಿ.ಎನ್ ಕುಲಕರ್ಣಿ, ದಂಡಪ್ಪ ಬಿರಾದಾರ ಹಾಗೂ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>