<p><strong>ಬೆಂಗಳೂರು:</strong> `ಸುವರ್ಣ ವಸ್ತ್ರ ನೀತಿ ಯೋಜನೆಯಡಿ 2013ರವರೆಗಿನ ಐದು ವರ್ಷಗಳ ಕಾಲಮಿತಿಯಲ್ಲಿ ಒಟ್ಟು ಐದು ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿಯನ್ನು ಸಾಧಿಸಲು ಸರ್ಕಾರ ಉದ್ದೇಶಿಸಿದೆ~ ಎಂದು ಜವಳಿ ಇಲಾಖೆ ಸಚಿವ ವರ್ತೂರು ಪ್ರಕಾಶ್ ತಿಳಿಸಿದರು. <br /> <br /> ಕೈಮಗ್ಗ ಮತ್ತು ಜವಳಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಸಹಯೋಗದಲ್ಲಿ ಗುರುವಾರ ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಜವಳಿ ಕ್ಷೇತ್ರದಲ್ಲಿ 10 ಸಾವಿರ ಕೋಟಿ ರೂಪಾಯಿಗಳ ಬಂಡವಾಳವನ್ನು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡಲು, ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ರಿಯಾಯಿತಿ ಮತ್ತು ಪ್ರೋತ್ಸಾಹಕ ಕ್ರಮ ಘೋಷಣೆ ಮಾಡಿದೆ~ ಎಂದರು.<br /> <br /> `ವಿದ್ಯುತ್ ಮಗ್ಗ ನೇಕಾರರಿಗೆ ಅನುಕೂಲವಾಗುವಂತೆ ಹೊಸದಾಗಿ ವಿದ್ಯುತ್ಮಗ್ಗಗಳನ್ನು ಖರೀದಿಸಲು ಶೇ 50ರಿಂದ 90ರಷ್ಟು ಸಹಾಯಧನವನ್ನು ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೇಕಾರರಿಗೆ ಒದಗಿಸಲಾಗುತ್ತಿದೆ. ಈ ಬಾರಿ 1500 ಜನರಿಗೆ ಸಹಾಯಧನ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. <br /> <br /> ಸಿದ್ಧ ಉಡುಪು ಘಟಕಗಳಿಗೆ ಮಾನವ ಸಂಪನ್ಮೂಲ ಪೂರೈಸಲು ಸುವರ್ಣ ವಸ್ತ್ರ ನೀತಿ ಯೋಜನೆಯಡಿ ಸೀವಿಂಗ್ ಯಂತ್ರ ಆಪರೇಟರ್ ಕೋರ್ಸ್ನಡಿ 67,684 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಇಲಾಖೆಯು 3.5 ಕೋಟಿ ರೂಪಾಯಿ ವ್ಯಯ ಮಾಡಿ ಉದ್ಯೋಗ ಒದಗಿಸಲಾಗಿದೆ~ ಎಂದರು.<br /> <br /> `ದೊಡ್ಡಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ರೂ 3 ಕೋಟಿ ಬಂಡವಾಳ ಹೂಡಿದ್ದು, 7500 ಜನರಿಗೆ ಉದ್ಯೋಗ ಕಲ್ಪಿಸಿದೆ. ಜೊತೆಗೆ ಸರ್ಕಾರವು ರೂ 4.8 ಕೋಟಿ ಸಹಾಯಧನ ಒದಗಿಸಿದೆ. ವಿವಿಧ ಜಿಲ್ಲೆಗಳಲ್ಲಿ ಒಟ್ಟು ರೂ 1070 ಕೋಟಿ ಯೋಜನಾ ಮೊತ್ತದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು. ಇದರಿಂದ 44,500 ಉದ್ಯೋಗ ಸೃಷ್ಟಿಯಾಗಲಿದೆ~ ಎಂದರು. <br /> <br /> ಜವಳಿ ಅಭಿವೃದ್ಧಿ ಆಯುಕ್ತ ಡಿ.ಎ.ವೆಂಕಟೇಶ್ ಮಾತನಾಡಿ, ಗಾರ್ಮೆಂಟ್ ಕೆಲಸದಲ್ಲಿ ತೊಡಗಿಸಿಕೊಳ್ಳುವ ಬಹುತೇಕ ವಲಸೆಗಾರರು ಕಡಿಮೆ ಓದಿದವರಾಗಿರುತ್ತಾರೆ. ಆದ್ದರಿಂದ ಅಂಥವರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡಲು ಈ ಕಾರ್ಯಾಗಾರ ಏರ್ಪಡಿಸಲಾಗಿದೆ~ ಎಂದು ತಿಳಿಸಿದರು. ಜಿ.ಪಂ.ಅಧ್ಯಕ್ಷ ಭಾಗ್ಯಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಸುವರ್ಣ ವಸ್ತ್ರ ನೀತಿ ಯೋಜನೆಯಡಿ 2013ರವರೆಗಿನ ಐದು ವರ್ಷಗಳ ಕಾಲಮಿತಿಯಲ್ಲಿ ಒಟ್ಟು ಐದು ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿಯನ್ನು ಸಾಧಿಸಲು ಸರ್ಕಾರ ಉದ್ದೇಶಿಸಿದೆ~ ಎಂದು ಜವಳಿ ಇಲಾಖೆ ಸಚಿವ ವರ್ತೂರು ಪ್ರಕಾಶ್ ತಿಳಿಸಿದರು. <br /> <br /> ಕೈಮಗ್ಗ ಮತ್ತು ಜವಳಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಸಹಯೋಗದಲ್ಲಿ ಗುರುವಾರ ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಜವಳಿ ಕ್ಷೇತ್ರದಲ್ಲಿ 10 ಸಾವಿರ ಕೋಟಿ ರೂಪಾಯಿಗಳ ಬಂಡವಾಳವನ್ನು ವಿವಿಧ ವಲಯಗಳಲ್ಲಿ ಹೂಡಿಕೆ ಮಾಡಲು, ಕೈಗಾರಿಕೆಗಳ ಅಭಿವೃದ್ಧಿಗೆ ಅನೇಕ ರಿಯಾಯಿತಿ ಮತ್ತು ಪ್ರೋತ್ಸಾಹಕ ಕ್ರಮ ಘೋಷಣೆ ಮಾಡಿದೆ~ ಎಂದರು.<br /> <br /> `ವಿದ್ಯುತ್ ಮಗ್ಗ ನೇಕಾರರಿಗೆ ಅನುಕೂಲವಾಗುವಂತೆ ಹೊಸದಾಗಿ ವಿದ್ಯುತ್ಮಗ್ಗಗಳನ್ನು ಖರೀದಿಸಲು ಶೇ 50ರಿಂದ 90ರಷ್ಟು ಸಹಾಯಧನವನ್ನು ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೇಕಾರರಿಗೆ ಒದಗಿಸಲಾಗುತ್ತಿದೆ. ಈ ಬಾರಿ 1500 ಜನರಿಗೆ ಸಹಾಯಧನ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. <br /> <br /> ಸಿದ್ಧ ಉಡುಪು ಘಟಕಗಳಿಗೆ ಮಾನವ ಸಂಪನ್ಮೂಲ ಪೂರೈಸಲು ಸುವರ್ಣ ವಸ್ತ್ರ ನೀತಿ ಯೋಜನೆಯಡಿ ಸೀವಿಂಗ್ ಯಂತ್ರ ಆಪರೇಟರ್ ಕೋರ್ಸ್ನಡಿ 67,684 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಇಲಾಖೆಯು 3.5 ಕೋಟಿ ರೂಪಾಯಿ ವ್ಯಯ ಮಾಡಿ ಉದ್ಯೋಗ ಒದಗಿಸಲಾಗಿದೆ~ ಎಂದರು.<br /> <br /> `ದೊಡ್ಡಬಳ್ಳಾಪುರದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ರೂ 3 ಕೋಟಿ ಬಂಡವಾಳ ಹೂಡಿದ್ದು, 7500 ಜನರಿಗೆ ಉದ್ಯೋಗ ಕಲ್ಪಿಸಿದೆ. ಜೊತೆಗೆ ಸರ್ಕಾರವು ರೂ 4.8 ಕೋಟಿ ಸಹಾಯಧನ ಒದಗಿಸಿದೆ. ವಿವಿಧ ಜಿಲ್ಲೆಗಳಲ್ಲಿ ಒಟ್ಟು ರೂ 1070 ಕೋಟಿ ಯೋಜನಾ ಮೊತ್ತದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು. ಇದರಿಂದ 44,500 ಉದ್ಯೋಗ ಸೃಷ್ಟಿಯಾಗಲಿದೆ~ ಎಂದರು. <br /> <br /> ಜವಳಿ ಅಭಿವೃದ್ಧಿ ಆಯುಕ್ತ ಡಿ.ಎ.ವೆಂಕಟೇಶ್ ಮಾತನಾಡಿ, ಗಾರ್ಮೆಂಟ್ ಕೆಲಸದಲ್ಲಿ ತೊಡಗಿಸಿಕೊಳ್ಳುವ ಬಹುತೇಕ ವಲಸೆಗಾರರು ಕಡಿಮೆ ಓದಿದವರಾಗಿರುತ್ತಾರೆ. ಆದ್ದರಿಂದ ಅಂಥವರಿಗೆ ಕೌಶಲ ಅಭಿವೃದ್ಧಿ ತರಬೇತಿ ನೀಡಲು ಈ ಕಾರ್ಯಾಗಾರ ಏರ್ಪಡಿಸಲಾಗಿದೆ~ ಎಂದು ತಿಳಿಸಿದರು. ಜಿ.ಪಂ.ಅಧ್ಯಕ್ಷ ಭಾಗ್ಯಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>