<p><strong>ನವದೆಹಲಿ (ಪಿಟಿಐ):</strong> ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿ/ ಪಂಗಡ ವಿಭಾಗಗಳಲ್ಲಿ ಖಾಲಿ ಇರುವ 50 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.<br /> <br /> ಐದು ರಾಜ್ಯಗಳಲ್ಲಿ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟರು ಗಣನೀಯ ಸಂಖ್ಯೆಯಲ್ಲಿರುವ ಉತ್ತರ ಪ್ರದೇಶ, ಪಂಜಾಬ್ ಹಾಗೂ ಉತ್ತರಾಖಂಡದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಸರ್ಕಾರದ ಈ ನಿರ್ಧಾರ ಹೊರಬಿದ್ದಂತಿದೆ. ಆದರೆ ಈಗಾಗಲೇ ಚುನಾವಣೆ ಘೋಷಣೆಯಾಗಿರುವುದರಿಂದ ಸಂಪುಟ ಪ್ರಸ್ತುತ ತೆಗೆದುಕೊಂಡ ನಿರ್ಧಾರ, ಚುನಾವಣೆ ಬಳಿಕ ಅನುಷ್ಠಾನಕ್ಕೆ ಬರಲಿದೆ. ಆದಾಗ್ಯೂ ಚುನಾವಣೆ ನಡೆಯಲಿರುವ ರಾಜ್ಯಗಳ ದಲಿತರು ಮತ್ತು ಆದಿವಾಸಿಗಳಿಗೆ ಸರ್ಕಾರ ಈ ಮೂಲಕ ಸಂದೇಶ ರವಾನಿಸಿದೆ ಎಂದು ವಿಶ್ಲೇಷಿಸಲಾಗಿದೆ.<br /> <br /> ಒಬಿಸಿ ಕೋಟಾದೊಳಗೆ ಅಲ್ಪಸಂಖ್ಯಾತರಿಗೆ ಶೇ 4.5ರಷ್ಟು ಮೀಸಲಾತಿ ನೀಡಲು ನಿರ್ಧಾರ ತೆಗೆದುಕೊಂಡ ಬೆನ್ನಲ್ಲಿಯೇ ಸಂಪುಟ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ.<br /> <br /> ಕೇಂದ್ರ ಸರ್ಕಾರದ ಪ.ಜಾತಿ/ ಪಂಗಡ ವಿಭಾಗಗಳಲ್ಲಿ ತೆರವಾದ ಸ್ಥಾನವನ್ನು ತುಂಬಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಈ ಮೊದಲು ಸಂಪುಟ ಟಿಪ್ಪಣಿಯ ಸುತ್ತೋಲೆ ಹೊರಡಿಸಲಾಗಿತ್ತು.<br /> <br /> ಈ ಹಿಂದೆ 2008ರಲ್ಲಿ ಸರ್ಕಾರ, ಪ.ಜಾತಿ/ ಪಂಗಡ ವಿಭಾಗಕ್ಕೆ ವಿಶೇಷ ನೇಮಕಾತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅದರ ಅಂಗವಾಗಿ ಈ ವಿಭಾಗಗಳಲ್ಲಿ ತೆರವಾದ ಸ್ಥಾನವನ್ನು ತುಂಬುವ ಕೆಲಸ ಮಾಡಲಾಗಿತ್ತು. <br /> ಆಕಾಂಕ್ಷಿಗಳಿಗೆ ತರಬೇತಿ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ ಅರ್ಧ ಡಜನ್ನಷ್ಟು ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ ಪ. ಜಾತಿಗೆ ಮೀಸಲಾದ ಹುದ್ದೆ ತುಂಬಿಲ್ಲ ಎಂದು ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕೇಂದ್ರ ಸರ್ಕಾರದ ಪರಿಶಿಷ್ಟ ಜಾತಿ/ ಪಂಗಡ ವಿಭಾಗಗಳಲ್ಲಿ ಖಾಲಿ ಇರುವ 50 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವಕ್ಕೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.<br /> <br /> ಐದು ರಾಜ್ಯಗಳಲ್ಲಿ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟರು ಗಣನೀಯ ಸಂಖ್ಯೆಯಲ್ಲಿರುವ ಉತ್ತರ ಪ್ರದೇಶ, ಪಂಜಾಬ್ ಹಾಗೂ ಉತ್ತರಾಖಂಡದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಸರ್ಕಾರದ ಈ ನಿರ್ಧಾರ ಹೊರಬಿದ್ದಂತಿದೆ. ಆದರೆ ಈಗಾಗಲೇ ಚುನಾವಣೆ ಘೋಷಣೆಯಾಗಿರುವುದರಿಂದ ಸಂಪುಟ ಪ್ರಸ್ತುತ ತೆಗೆದುಕೊಂಡ ನಿರ್ಧಾರ, ಚುನಾವಣೆ ಬಳಿಕ ಅನುಷ್ಠಾನಕ್ಕೆ ಬರಲಿದೆ. ಆದಾಗ್ಯೂ ಚುನಾವಣೆ ನಡೆಯಲಿರುವ ರಾಜ್ಯಗಳ ದಲಿತರು ಮತ್ತು ಆದಿವಾಸಿಗಳಿಗೆ ಸರ್ಕಾರ ಈ ಮೂಲಕ ಸಂದೇಶ ರವಾನಿಸಿದೆ ಎಂದು ವಿಶ್ಲೇಷಿಸಲಾಗಿದೆ.<br /> <br /> ಒಬಿಸಿ ಕೋಟಾದೊಳಗೆ ಅಲ್ಪಸಂಖ್ಯಾತರಿಗೆ ಶೇ 4.5ರಷ್ಟು ಮೀಸಲಾತಿ ನೀಡಲು ನಿರ್ಧಾರ ತೆಗೆದುಕೊಂಡ ಬೆನ್ನಲ್ಲಿಯೇ ಸಂಪುಟ ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ.<br /> <br /> ಕೇಂದ್ರ ಸರ್ಕಾರದ ಪ.ಜಾತಿ/ ಪಂಗಡ ವಿಭಾಗಗಳಲ್ಲಿ ತೆರವಾದ ಸ್ಥಾನವನ್ನು ತುಂಬಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಈ ಮೊದಲು ಸಂಪುಟ ಟಿಪ್ಪಣಿಯ ಸುತ್ತೋಲೆ ಹೊರಡಿಸಲಾಗಿತ್ತು.<br /> <br /> ಈ ಹಿಂದೆ 2008ರಲ್ಲಿ ಸರ್ಕಾರ, ಪ.ಜಾತಿ/ ಪಂಗಡ ವಿಭಾಗಕ್ಕೆ ವಿಶೇಷ ನೇಮಕಾತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅದರ ಅಂಗವಾಗಿ ಈ ವಿಭಾಗಗಳಲ್ಲಿ ತೆರವಾದ ಸ್ಥಾನವನ್ನು ತುಂಬುವ ಕೆಲಸ ಮಾಡಲಾಗಿತ್ತು. <br /> ಆಕಾಂಕ್ಷಿಗಳಿಗೆ ತರಬೇತಿ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ ಅರ್ಧ ಡಜನ್ನಷ್ಟು ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ ಪ. ಜಾತಿಗೆ ಮೀಸಲಾದ ಹುದ್ದೆ ತುಂಬಿಲ್ಲ ಎಂದು ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>