<p>ಬೆಂಗಳೂರು: ನಗರದ ಬಿಲ್ಲವ ಅಸೋಸಿಯೇಷನ್ ವತಿಯಿಂದ 7ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಭಾನುವಾರ ಆಯೋಜಿಸಲಾಗಿತ್ತು.<br /> <br /> ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬಿಬಿಎಂಪಿಯ ಮಾಜಿ ಸದಸ್ಯ ಕೆ.ಎಸ್.ದುಶ್ಯಂತ್, `ಬಿಲ್ಲವ ಅಸೋಸಿಯೇಷನ್ ಉಚಿತವಾಗಿ ಜನರಿಗೆ ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದೆ. ಇನ್ನು ಮುಂದೆಯೂ ಸೇವೆಯನ್ನು ಮುಂದುವರೆಸಿಕೊಂಡು ಬೆಳೆಸುವಂತಾಗಲಿ~ ಎಂದು ಆಶಿಸಿದರು.<br /> <br /> ಡಾ. ಪುರುಷೋತ್ತಮ್ ಮಾತನಾಡಿ, `ಸ್ಥಳೀಯ ಬಡ ಜನರಿಗೋಸ್ಕರ 6 ವರ್ಷಗಳಿಂದ ಈ ಕಾರ್ಯಕ್ರಮವನ್ನು ಸಂಘವು ನಡೆಸಿಕೊಂಡು ಬರುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ~ ಎಂದರು.<br /> <br /> `ಸಂಘದ ವತಿಯಿಂದ ಉಚಿತ ಆರೋಗ್ಯ ಸೇವೆ, ವಿದ್ಯಾರ್ಥಿವೇತನ, ಉಚಿತ ಊಟ ಹಾಗೂ ವಸತಿಯ ವಿದ್ಯಾರ್ಥಿನಿಲಯ ಮುಂತಾದ ಸೇವಾ ಕಾರ್ಯಗಳನ್ನು ಸಂಘವು ಯಶಸ್ವಿಯಾಗಿ ಕೈಗೊಂಡಿದೆ~ ಎಂದು ಅವರು ಹೇಳಿದರು.<br /> <br /> ಸಂಘದ ಅಧ್ಯಕ್ಷ ಎಂ.ವೇದಕುಮಾರ್ ಮಾತನಾಡಿ, `ಸಂಘವು ನಡೆಸಿಕೊಂಡು ಬರುತ್ತಿರುವ ಎಲ್ಲ ಕಾರ್ಯಗಳಿಗೂ ಸಮಾಜದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಉಚಿತ ಆರೋಗ್ಯ ಕೇಂದ್ರವನ್ನು ಸ್ಥಾಪಿಸಿ, ಸುತ್ತ ಮುತ್ತಲಿನ ಜನರಿಗೆ ಉಚಿತ ವೈದ್ಯಕೀಯ ಸೇವೆ ನೀಡುವ ಕನಸಿದೆ~ ಎಂದರು.<br /> ಶಿಬಿರದಲ್ಲಿ ಸುಮಾರು 100 ಜನರು ರಕ್ತದಾನ ಮಾಡಿದರು. 500 ಕ್ಕಿಂತಲೂ ಹೆಚ್ಚಿನ ಜನರು ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಬಿಲ್ಲವ ಅಸೋಸಿಯೇಷನ್ ವತಿಯಿಂದ 7ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಭಾನುವಾರ ಆಯೋಜಿಸಲಾಗಿತ್ತು.<br /> <br /> ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಬಿಬಿಎಂಪಿಯ ಮಾಜಿ ಸದಸ್ಯ ಕೆ.ಎಸ್.ದುಶ್ಯಂತ್, `ಬಿಲ್ಲವ ಅಸೋಸಿಯೇಷನ್ ಉಚಿತವಾಗಿ ಜನರಿಗೆ ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದೆ. ಇನ್ನು ಮುಂದೆಯೂ ಸೇವೆಯನ್ನು ಮುಂದುವರೆಸಿಕೊಂಡು ಬೆಳೆಸುವಂತಾಗಲಿ~ ಎಂದು ಆಶಿಸಿದರು.<br /> <br /> ಡಾ. ಪುರುಷೋತ್ತಮ್ ಮಾತನಾಡಿ, `ಸ್ಥಳೀಯ ಬಡ ಜನರಿಗೋಸ್ಕರ 6 ವರ್ಷಗಳಿಂದ ಈ ಕಾರ್ಯಕ್ರಮವನ್ನು ಸಂಘವು ನಡೆಸಿಕೊಂಡು ಬರುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯ~ ಎಂದರು.<br /> <br /> `ಸಂಘದ ವತಿಯಿಂದ ಉಚಿತ ಆರೋಗ್ಯ ಸೇವೆ, ವಿದ್ಯಾರ್ಥಿವೇತನ, ಉಚಿತ ಊಟ ಹಾಗೂ ವಸತಿಯ ವಿದ್ಯಾರ್ಥಿನಿಲಯ ಮುಂತಾದ ಸೇವಾ ಕಾರ್ಯಗಳನ್ನು ಸಂಘವು ಯಶಸ್ವಿಯಾಗಿ ಕೈಗೊಂಡಿದೆ~ ಎಂದು ಅವರು ಹೇಳಿದರು.<br /> <br /> ಸಂಘದ ಅಧ್ಯಕ್ಷ ಎಂ.ವೇದಕುಮಾರ್ ಮಾತನಾಡಿ, `ಸಂಘವು ನಡೆಸಿಕೊಂಡು ಬರುತ್ತಿರುವ ಎಲ್ಲ ಕಾರ್ಯಗಳಿಗೂ ಸಮಾಜದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ಯವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಉಚಿತ ಆರೋಗ್ಯ ಕೇಂದ್ರವನ್ನು ಸ್ಥಾಪಿಸಿ, ಸುತ್ತ ಮುತ್ತಲಿನ ಜನರಿಗೆ ಉಚಿತ ವೈದ್ಯಕೀಯ ಸೇವೆ ನೀಡುವ ಕನಸಿದೆ~ ಎಂದರು.<br /> ಶಿಬಿರದಲ್ಲಿ ಸುಮಾರು 100 ಜನರು ರಕ್ತದಾನ ಮಾಡಿದರು. 500 ಕ್ಕಿಂತಲೂ ಹೆಚ್ಚಿನ ಜನರು ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>