<p><strong>ಮೈಸೂರು: `</strong>ಕನ್ನಡ ಭಾಷಾ ಬಳಕೆ ಮತ್ತು ಅಭಿವೃದ್ಧಿ ದೃಷ್ಟಿಯಿಂದ ತಂತ್ರಾಶದಲ್ಲಿ ಕನ್ನಡವನ್ನು ಹೆಚ್ಚಾಗಿ ಬಳಸುವ ಅಗತ್ಯವಿದೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಮನು ಬಳಿಗಾರ್ ಅಭಿಪ್ರಾಯಪಟ್ಟರು<br /> .<br /> ಮಹಾರಾಜ ಕಾಲೇಜು ಆವರಣದ ಶತಮಾನೋತ್ಸವ ಭವನದಲ್ಲಿ ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯ ಯನ ಸಂಸ್ಥೆ ಶುಕ್ರವಾರ ಏರ್ಪಡಿಸಿದ್ದ `ಧರ್ಮಶಾಸ್ತ್ರ ಇತಿಹಾಸ~ ಹಾಗೂ ಇತರೆ 52 ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `2008ರ ಅಕ್ಟೋಬರ್ 31ರಂದು ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕನ್ನಡದ ಅಭಿವೃದ್ಧಿಗಾಗಿ 11 ವಿವಿಗಳಿಗೆ ತಲಾ ರೂ. 22 ಕೋಟಿ ಅನುದಾನ ಮೀಸಲಿಟ್ಟು, 11 ಕೋಟಿಯನ್ನು ಬಿಡುಗಡೆ ಮಾಡಿತ್ತು. ಆ ಅನುದಾನ ಬಳಸಿಕೊಂಡು 54 ಮಹತ್ವದ ಕೃತಿಗಳನ್ನು ಹೊರ ತಂದಿರುವುದು ಸ್ವಾಗತಾರ್ಹ. ರೂ. 1 ಕೋಟಿಯನ್ನು ಸಂಪೂರ್ಣವಾಗಿ ಬಳಸಿಕೊಂಡರೆ ಮತ್ತೆ ಪ್ರತಿ ವಿವಿಗಳಿಗೆ ರೂ. 30 ಲಕ್ಷ ಅನುದಾನ ನೀಡಲಾಗುವುದು~ ಎಂದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಮಾತನಾಡಿ, `ವಿಶ್ವವಿದ್ಯಾನಿಲಯಗಳು ಪುಸ್ತಕ ಪ್ರಕಟಣೆ ಮಾಡಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಜ್ಞಾನದ ಅಭಿರುಚಿಯನ್ನು ಬೆಳೆಸಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಸಾಹಿತ್ಯ ಪುಸ್ತಕಗಳನ್ನು ಓದುವ ಮನೋಭಾವ ರೂಡಿಸಿಕೊಳ್ಳಬೇಕು~ ಎಂದು ಹೇಳಿದರು.<br /> <br /> ಕುಲಪತಿ ಪ್ರೊ.ವಿ.ಜಿ.ತಳವಾರ್, ಕುಲಸಚಿವ ಪ್ರೊ.ಪಿ.ಎಸ್.ನಾಯಕ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಕೆ.ಎನ್.ಗಂಗಾನಾಯಕ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: `</strong>ಕನ್ನಡ ಭಾಷಾ ಬಳಕೆ ಮತ್ತು ಅಭಿವೃದ್ಧಿ ದೃಷ್ಟಿಯಿಂದ ತಂತ್ರಾಶದಲ್ಲಿ ಕನ್ನಡವನ್ನು ಹೆಚ್ಚಾಗಿ ಬಳಸುವ ಅಗತ್ಯವಿದೆ~ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಮನು ಬಳಿಗಾರ್ ಅಭಿಪ್ರಾಯಪಟ್ಟರು<br /> .<br /> ಮಹಾರಾಜ ಕಾಲೇಜು ಆವರಣದ ಶತಮಾನೋತ್ಸವ ಭವನದಲ್ಲಿ ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯ ಯನ ಸಂಸ್ಥೆ ಶುಕ್ರವಾರ ಏರ್ಪಡಿಸಿದ್ದ `ಧರ್ಮಶಾಸ್ತ್ರ ಇತಿಹಾಸ~ ಹಾಗೂ ಇತರೆ 52 ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `2008ರ ಅಕ್ಟೋಬರ್ 31ರಂದು ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕನ್ನಡದ ಅಭಿವೃದ್ಧಿಗಾಗಿ 11 ವಿವಿಗಳಿಗೆ ತಲಾ ರೂ. 22 ಕೋಟಿ ಅನುದಾನ ಮೀಸಲಿಟ್ಟು, 11 ಕೋಟಿಯನ್ನು ಬಿಡುಗಡೆ ಮಾಡಿತ್ತು. ಆ ಅನುದಾನ ಬಳಸಿಕೊಂಡು 54 ಮಹತ್ವದ ಕೃತಿಗಳನ್ನು ಹೊರ ತಂದಿರುವುದು ಸ್ವಾಗತಾರ್ಹ. ರೂ. 1 ಕೋಟಿಯನ್ನು ಸಂಪೂರ್ಣವಾಗಿ ಬಳಸಿಕೊಂಡರೆ ಮತ್ತೆ ಪ್ರತಿ ವಿವಿಗಳಿಗೆ ರೂ. 30 ಲಕ್ಷ ಅನುದಾನ ನೀಡಲಾಗುವುದು~ ಎಂದರು.<br /> <br /> ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಮಾತನಾಡಿ, `ವಿಶ್ವವಿದ್ಯಾನಿಲಯಗಳು ಪುಸ್ತಕ ಪ್ರಕಟಣೆ ಮಾಡಿದರೆ ಸಾಲದು. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಹಾಗೂ ಜ್ಞಾನದ ಅಭಿರುಚಿಯನ್ನು ಬೆಳೆಸಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೆ ಸಾಹಿತ್ಯ ಪುಸ್ತಕಗಳನ್ನು ಓದುವ ಮನೋಭಾವ ರೂಡಿಸಿಕೊಳ್ಳಬೇಕು~ ಎಂದು ಹೇಳಿದರು.<br /> <br /> ಕುಲಪತಿ ಪ್ರೊ.ವಿ.ಜಿ.ತಳವಾರ್, ಕುಲಸಚಿವ ಪ್ರೊ.ಪಿ.ಎಸ್.ನಾಯಕ್, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಕೆ.ಎನ್.ಗಂಗಾನಾಯಕ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>