<p>ಬೆಂಗಳೂರು: ಮಹಿಳೆಯೊಬ್ಬರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬೆದರಿಸಿ 62 ಸಾವಿರ ನಗದು ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿರುವ ಘಟನೆ ಬಾಣಸವಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.<br /> <br /> ತ್ರಿಪುರಾ ಮೂಲದ ಪ್ರತಿಮಾನಾಥ್ ಎಂಬುವರು ಈ ಸಂಬಂಧ ದೂರು ಕೊಟ್ಟಿದ್ದಾರೆ. ಅವರು ಕಮ್ಮನಹಳ್ಳಿಯಲ್ಲಿ ನೆಲೆಸಿರುವ ಸಹೋದರಿ ಪ್ರಿಯಾಂಕಾ ಅವರ ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಮರ್ಷಿಯಲ್ ಸ್ಟ್ರೀಟ್ಗೆ ಹೊರಟಿದ್ದ ಪ್ರಿಯಾಂಕಾ ಮತ್ತು ಪ್ರತಿಮಾನಾಥ್ ಅವರು ಬಾಣಸವಾಡಿ ನಾಲ್ಕನೇ ಮುಖ್ಯರಸ್ತೆಯಲ್ಲಿ ರಾತ್ರಿ ಆಟೊಗೆ ಕಾಯುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಬೈಕ್ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್ ಫೋನ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> ಮುಖ್ಯ ಕಾನ್ಸ್ಟೇಬಲ್ಗಳಿಗೆ ಬಡ್ತಿ<br /> ನಗರದ ವಿವಿಧ ಪೊಲೀಸ್ ಠಾಣೆಗಳ 200 ಮಂದಿ ಮುಖ್ಯ ಕಾನ್ಸ್ಟೇಬಲ್ಗಳಿಗೆ ಎಎಸ್ಐ ಹುದ್ದೆಗೆ ಬಡ್ತಿ ನೀಡಿ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.<br /> <br /> ಬಡ್ತಿ ಪಡೆದ ಸಿಬ್ಬಂದಿಗೆ ಸೂಚಿಸಲಾದ ಠಾಣೆಗಳಲ್ಲಿ ಮಂಗಳವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಿರ್ಜಿ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಹಿಳೆಯೊಬ್ಬರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬೆದರಿಸಿ 62 ಸಾವಿರ ನಗದು ಹಾಗೂ ಮೊಬೈಲ್ ಫೋನ್ ದರೋಡೆ ಮಾಡಿರುವ ಘಟನೆ ಬಾಣಸವಾಡಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.<br /> <br /> ತ್ರಿಪುರಾ ಮೂಲದ ಪ್ರತಿಮಾನಾಥ್ ಎಂಬುವರು ಈ ಸಂಬಂಧ ದೂರು ಕೊಟ್ಟಿದ್ದಾರೆ. ಅವರು ಕಮ್ಮನಹಳ್ಳಿಯಲ್ಲಿ ನೆಲೆಸಿರುವ ಸಹೋದರಿ ಪ್ರಿಯಾಂಕಾ ಅವರ ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಕಮರ್ಷಿಯಲ್ ಸ್ಟ್ರೀಟ್ಗೆ ಹೊರಟಿದ್ದ ಪ್ರಿಯಾಂಕಾ ಮತ್ತು ಪ್ರತಿಮಾನಾಥ್ ಅವರು ಬಾಣಸವಾಡಿ ನಾಲ್ಕನೇ ಮುಖ್ಯರಸ್ತೆಯಲ್ಲಿ ರಾತ್ರಿ ಆಟೊಗೆ ಕಾಯುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಬೈಕ್ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ಹಣ, ಮೊಬೈಲ್ ಫೋನ್ ಮತ್ತು ಮತದಾರರ ಗುರುತಿನ ಚೀಟಿಯನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> ಮುಖ್ಯ ಕಾನ್ಸ್ಟೇಬಲ್ಗಳಿಗೆ ಬಡ್ತಿ<br /> ನಗರದ ವಿವಿಧ ಪೊಲೀಸ್ ಠಾಣೆಗಳ 200 ಮಂದಿ ಮುಖ್ಯ ಕಾನ್ಸ್ಟೇಬಲ್ಗಳಿಗೆ ಎಎಸ್ಐ ಹುದ್ದೆಗೆ ಬಡ್ತಿ ನೀಡಿ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.<br /> <br /> ಬಡ್ತಿ ಪಡೆದ ಸಿಬ್ಬಂದಿಗೆ ಸೂಚಿಸಲಾದ ಠಾಣೆಗಳಲ್ಲಿ ಮಂಗಳವಾರದಿಂದಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮಿರ್ಜಿ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>