<p><strong>ನವದೆಹಲಿ: </strong>ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಡತನ ರೇಖೆಗಿಂತ ಮೇಲಿರುವವರು ಮತ್ತು ಮಧ್ಯಮ ವರ್ಗಕ್ಕಿಂತ ಕೆಳಗಿರುವವರ ಮತಗಳನ್ನು ಸೆಳೆಯುವುದಕ್ಕಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ಆಲೋಚನೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ.<br /> <br /> ದೇಶದಲ್ಲಿ ಬಡತನ ರೇಖೆಗಿಂತ ಮೇಲಿರುವವರು ಆದರೆ ಮಧ್ಯಮ ವರ್ಗಕ್ಕಿಂತ ಕೆಳಗಿರುವವರ ಸಂಖ್ಯೆ 70 ಕೋಟಿ ಇದೆ. ಈ ವರ್ಗವನ್ನು ಪ್ರಮುಖವಾಗಿ ಗಮನದಲ್ಲಿಟ್ಟು ಚುನಾವಣಾ ಪ್ರಚಾರ ನಡೆಸಬೇಕೆಂದು ಜನವರಿ 17ರ ಎಐಸಿಸಿ ಸಭೆಯಲ್ಲಿ ರಾಹುಲ್ ಗಾಂಧಿ ಹೇಳಿದ್ದರು.<br /> ರಾಹುಲ್ ಅವರ ಈ ಯೋಚನೆಯನ್ನು ಆ ವರ್ಗದವರಿಗೆ ಪ್ರಚಾರ ಸಂದರ್ಭದಲ್ಲಿ ಮನದಟ್ಟು ಮಾಡಿಕೊಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರು ಪಕ್ಷದ ಎಲ್ಲ ರಾಜ್ಯ ಘಟಕಗಳ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ಕಾಂಗ್ರೆಸ್ ಗುರುತಿಸಿರುವ 34 ವರ್ಗಗಳಲ್ಲಿ ಉತ್ತರ ಪ್ರದೇಶದ ನೇಕಾರರು, ಕೇರಳದ ತೋಟಗಾರಿಕಾ ಕಾರ್ಮಿಕರು, ಮುಂಬೈ ಡಬ್ಬಾವಾಲಾಗಳು, ಮೀನುಗಾರರು, ರೈಲ್ವೆ ಇಲಾಖೆಯ ಕಾವಲುಗಾರರು ಮತ್ತು ಬೀದಿ ಬದಿ ವ್ಯಾಪಾರಿಗಳು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಡತನ ರೇಖೆಗಿಂತ ಮೇಲಿರುವವರು ಮತ್ತು ಮಧ್ಯಮ ವರ್ಗಕ್ಕಿಂತ ಕೆಳಗಿರುವವರ ಮತಗಳನ್ನು ಸೆಳೆಯುವುದಕ್ಕಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರ ಆಲೋಚನೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ.<br /> <br /> ದೇಶದಲ್ಲಿ ಬಡತನ ರೇಖೆಗಿಂತ ಮೇಲಿರುವವರು ಆದರೆ ಮಧ್ಯಮ ವರ್ಗಕ್ಕಿಂತ ಕೆಳಗಿರುವವರ ಸಂಖ್ಯೆ 70 ಕೋಟಿ ಇದೆ. ಈ ವರ್ಗವನ್ನು ಪ್ರಮುಖವಾಗಿ ಗಮನದಲ್ಲಿಟ್ಟು ಚುನಾವಣಾ ಪ್ರಚಾರ ನಡೆಸಬೇಕೆಂದು ಜನವರಿ 17ರ ಎಐಸಿಸಿ ಸಭೆಯಲ್ಲಿ ರಾಹುಲ್ ಗಾಂಧಿ ಹೇಳಿದ್ದರು.<br /> ರಾಹುಲ್ ಅವರ ಈ ಯೋಚನೆಯನ್ನು ಆ ವರ್ಗದವರಿಗೆ ಪ್ರಚಾರ ಸಂದರ್ಭದಲ್ಲಿ ಮನದಟ್ಟು ಮಾಡಿಕೊಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರು ಪಕ್ಷದ ಎಲ್ಲ ರಾಜ್ಯ ಘಟಕಗಳ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.<br /> <br /> ಕಾಂಗ್ರೆಸ್ ಗುರುತಿಸಿರುವ 34 ವರ್ಗಗಳಲ್ಲಿ ಉತ್ತರ ಪ್ರದೇಶದ ನೇಕಾರರು, ಕೇರಳದ ತೋಟಗಾರಿಕಾ ಕಾರ್ಮಿಕರು, ಮುಂಬೈ ಡಬ್ಬಾವಾಲಾಗಳು, ಮೀನುಗಾರರು, ರೈಲ್ವೆ ಇಲಾಖೆಯ ಕಾವಲುಗಾರರು ಮತ್ತು ಬೀದಿ ಬದಿ ವ್ಯಾಪಾರಿಗಳು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>