<p><strong>ಬೆಂಗಳೂರು:</strong> ಸರ್ಕಾರಿ ಪ್ರೌಢಶಾಲೆಗಳಲ್ಲಿ ಒಂದು ವಿಭಾಗಕ್ಕೆ 70 ವಿದ್ಯಾರ್ಥಿಗಳನ್ನು ನಿಗದಿಪಡಿಸಿ, ಅದರ ಆಧಾರದ ಮೇಲೆ ಹೆಚ್ಚುವರಿ ಶಿಕ್ಷಕರನ್ನು ಸ್ಥಳಾಂತರಿಸುವ ಸರ್ಕಾರದ ಕ್ರಮಕ್ಕೆ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.<br /> <br /> ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರ ಅನುಪಾತ 30:1ರ ಪ್ರಮಾಣದಲ್ಲಿದೆ. ಆದರ್ಶ ವಿದ್ಯಾಲಯಗಳಲ್ಲಿ 40:1ರ ಅನುಪಾತವಿದೆ. ಆದರೆ ಪ್ರೌಢಶಾಲೆಗಳಲ್ಲಿ 70:1ರ ಪ್ರಮಾಣ ನಿಗದಿ ಮಾಡಿರುವುದು ಸರಿಯಲ್ಲ ಎಂದು ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗೌಡರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಈ ಆದೇಶದಿಂದ ಬೋಧನಾ ಅವಧಿ ವಾರಕ್ಕೆ 26ರಿಂದ 36 ಗಂಟೆಗೆ ಹೆಚ್ಚಳವಾಗಲಿದೆ. ಶಿಕ್ಷಕರಿಗೆ ಒತ್ತಡ ಹೆಚ್ಚಾಗಿಲಿದೆ ಎಂದು ಹೇಳಿದ್ದಾರೆ.<br /> <br /> ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಪ್ರಕಾರ ಪ್ರೌಢಶಾಲೆಗಳಲ್ಲಿ 40 ಮಕ್ಕಳಿಗೆ ಒಬ್ಬ ಶಿಕ್ಷಕ ಇರಬೇಕು. ಇದ್ಯಾವುದನ್ನೂ ಗಮನಿಸದೆ ಅವೈಜ್ಞಾನಿಕವಾಗಿ ಹೆಚ್ಚುವರಿ ಶಿಕ್ಷಕರು, ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವಂತೆ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದಿದ್ದಾರೆ.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಇದೇ 2ರಂದು ಹೊರಡಿಸಿರುವ ಆದೇಶದ ಪ್ರಕಾರ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸಿದರೆ ಕಲಾ ಶಿಕ್ಷಕರ ಹುದ್ದೆಗಳು ಕಡಿಮೆಯಾಗಲಿವೆ. ಇದರಿಂದ ಗುಣಮಟ್ಟದ ಬೋಧನೆಗೆ ತೊಂದರೆಯಾಗಲಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಪ್ರೌಢಶಾಲೆಗಳಲ್ಲಿ ಒಂದು ವಿಭಾಗಕ್ಕೆ 70 ವಿದ್ಯಾರ್ಥಿಗಳನ್ನು ನಿಗದಿಪಡಿಸಿ, ಅದರ ಆಧಾರದ ಮೇಲೆ ಹೆಚ್ಚುವರಿ ಶಿಕ್ಷಕರನ್ನು ಸ್ಥಳಾಂತರಿಸುವ ಸರ್ಕಾರದ ಕ್ರಮಕ್ಕೆ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.<br /> <br /> ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರ ಅನುಪಾತ 30:1ರ ಪ್ರಮಾಣದಲ್ಲಿದೆ. ಆದರ್ಶ ವಿದ್ಯಾಲಯಗಳಲ್ಲಿ 40:1ರ ಅನುಪಾತವಿದೆ. ಆದರೆ ಪ್ರೌಢಶಾಲೆಗಳಲ್ಲಿ 70:1ರ ಪ್ರಮಾಣ ನಿಗದಿ ಮಾಡಿರುವುದು ಸರಿಯಲ್ಲ ಎಂದು ಸಂಘದ ಅಧ್ಯಕ್ಷ ಎಚ್.ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮಲ್ಲನಗೌಡ ಗೌಡರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಈ ಆದೇಶದಿಂದ ಬೋಧನಾ ಅವಧಿ ವಾರಕ್ಕೆ 26ರಿಂದ 36 ಗಂಟೆಗೆ ಹೆಚ್ಚಳವಾಗಲಿದೆ. ಶಿಕ್ಷಕರಿಗೆ ಒತ್ತಡ ಹೆಚ್ಚಾಗಿಲಿದೆ ಎಂದು ಹೇಳಿದ್ದಾರೆ.<br /> <br /> ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆ ಪ್ರಕಾರ ಪ್ರೌಢಶಾಲೆಗಳಲ್ಲಿ 40 ಮಕ್ಕಳಿಗೆ ಒಬ್ಬ ಶಿಕ್ಷಕ ಇರಬೇಕು. ಇದ್ಯಾವುದನ್ನೂ ಗಮನಿಸದೆ ಅವೈಜ್ಞಾನಿಕವಾಗಿ ಹೆಚ್ಚುವರಿ ಶಿಕ್ಷಕರು, ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವಂತೆ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದಿದ್ದಾರೆ.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಇದೇ 2ರಂದು ಹೊರಡಿಸಿರುವ ಆದೇಶದ ಪ್ರಕಾರ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸಿದರೆ ಕಲಾ ಶಿಕ್ಷಕರ ಹುದ್ದೆಗಳು ಕಡಿಮೆಯಾಗಲಿವೆ. ಇದರಿಂದ ಗುಣಮಟ್ಟದ ಬೋಧನೆಗೆ ತೊಂದರೆಯಾಗಲಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>