ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಚೂರು ತಾಲ್ಲೂಕು ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ರೈತರು ಟೊಮೆಟೊ ಬೆಳಗಾರರ ಸಮಸ್ಯೆ ಪರಿಹಾರಕ್ಕೆ ಸರ್ಕಾರಕ್ಕೆ ಜಿಲ್ಲಾಡಳಿತ ಕಚೇರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.ಸಂಘಟನೆ ರಾಯಚೂರು ತಾಲ್ಲೂಕು ಸಮಿತಿ ಅಧ್ಯಕ್ಷ ಜಂಬನಗೌಡ ಕಡಗಂದೊಡ್ಡಿ, ಜಿಲ್ಲಾ ಸಂಚಾಲಕ ಬಸವರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ ಪಾಷಾ ದಿದ್ದಗಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.