<p><strong>ಬೆಂಗಳೂರು: </strong>ಕಳಸಾ–ಬಂಡೂರಿ ನಾಲಾ ಯೋಜನೆಯಿಂದ 7.56 ಟಿಎಂಸಿ ಅಡಿ ನೀರು ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಮಧ್ಯಂತರ ಆದೇಶ ನೀಡಲು ಕೋರಿ ರಾಜ್ಯ ಸರ್ಕಾರ ಮಹಾದಾಯಿ ನ್ಯಾಯಮಂಡಳಿಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿ ಕರೆದಿದ್ದ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ ಮಧ್ಯಂತರ ಆದೇಶಕ್ಕಾಗಿ ಮನವಿ ಸಲ್ಲಿಸುವ ಕುರಿತು ಚರ್ಚೆಯಾಗಿದೆ.<br /> <br /> ಹುಬ್ಬಳ್ಳಿ – ಧಾರವಾಡ, ಬಾಗಲಕೋಟೆ, ಗದಗ, ಬೆಳಗಾವಿ ನಗರ ಹಾಗೂ ಕೆಲವು ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು ರಾಜ್ಯ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.<br /> <br /> ಆದರೆ, ಗೋವಾ ರಾಜ್ಯ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹಾದಾಯಿ ನ್ಯಾಯಮಂಡಳಿ ರಚಿಸಿದ್ದು, ಮಂಡಳಿಯ ಅಧ್ಯಕ್ಷ ಜೆ.ಎಂ.ಪಾಂಚಾಲ್ ನೇತೃತ್ವದ ತಂಡ ವಾಸ್ತವ ಸ್ಥಿತಿ ಅರಿಯಲು ರಾಜ್ಯದಲ್ಲಿ ಪ್ರವಾಸ ಹಮ್ಮಿಕೊಂಡಿದೆ.<br /> <br /> ಮಹಾದಾಯಿ ನದಿಯಲ್ಲಿ ರಾಜ್ಯದ ಪಾಲು 24.15 ಟಿಎಂಸಿ ಅಡಿ ಎಂದು ಕರ್ನಾಟಕ ಹೇಳುತ್ತಿದೆ. ಈ ನದಿ ಮಹಾರಾಷ್ಟ್ರ ಮತ್ತು ಗೋವಾದಲ್ಲೂ ಹರಿಯುತ್ತಿದ್ದು, ಒಟ್ಟಾರೆ ಮೂರೂ ರಾಜ್ಯಗಳಿಗೆ ನೀರು ಹಂಚಿಕೆಯಾಗಬೇಕು.<br /> <br /> ಮಧ್ಯಂತರ ತೀರ್ಪು ಬಂದರೆ ಕೇಂದ್ರ ಜಲ ಆಯೋಗ ಮತ್ತು ಪರಿಸರ ಇಲಾಖೆಯ ಅನುಮತಿ ಪಡೆದು ಕಳಸಾ ಬಳಿ ಡ್ಯಾಂ ನಿರ್ಮಿಸಲು ಅನುಕೂಲವಾಗಲಿದೆ. ಇದು ಅರಣ್ಯದ ವ್ಯಾಪ್ತಿಯಲ್ಲಿ ಬರಲಿದ್ದು, ಡ್ಯಾಂ ನಿರ್ಮಾಣವಾಗದ ಹೊರತು ನಾಲೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡರೂ ನೀರು ಬಳಸಿಕೊಳ್ಳಲು ಆಗುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.<br /> <br /> 2014ರ ಜುಲೈ ವೇಳೆಗೆ ನಾಲೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಮಧ್ಯಂತರ ಆದೇಶ ಬಂದರೆ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದರು. ನ್ಯಾಯ-ಮಂಡಳಿಯ ಮುಂದಿನ ವಿಚಾರಣೆ ಮಾರ್ಚ್ 4ರಂದು ನಡೆಯಲಿದೆ.<br /> <br /> <strong>ತಜ್ಞರೊಂದಿಗೆ ಚರ್ಚೆ:</strong> ಕಾನೂನು ತಜ್ಞರೊಂದಿಗೆ ಚರ್ಚಿಸಿದ ನಂತರ ರಾಜ್ಯದ ನಿಲುವನ್ನು ನ್ಯಾಯಮಂಡಳಿಗೆ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು.<br /> <br /> ನ್ಯಾಯಮಂಡಳಿ ಮುಂದೆ ಸಮರ್ಥವಾಗಿ ವಾದ ಮಂಡನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಂತರರಾಜ್ಯ ಜಲ ವಿವಾದಗಳಲ್ಲಿ ರಾಜ್ಯದ ಪರವಾಗಿ ವಾದ ಮಾಡುತ್ತಿರುವ ಕಾನೂನು ತಂಡದೊಂದಿಗೆ ಈ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.<br /> <br /> ವಿರೋಧ ಪಕ್ಷಗಳ ಮುಖಂಡರಿಂದ ಅನೇಕ ಸಲಹೆಗಳು ಬಂದಿವೆ. ಅವುಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು. ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರದ ನಿಲುವು ಏನಾಗಿರುತ್ತದೆ ಎಂದು ಈಗಲೇ ಹೇಳುವುದು ಕಷ್ಟ ಎಂದರು.<br /> <br /> ಡ್ಯಾಂ ನಿರ್ಮಾಣ ಕಾರ್ಯವನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು. ಪರಿಸರ ಇಲಾಖೆಯ ಅನುಮತಿ ಪಡೆಯಬೇಕು. ಮಧ್ಯಂತರ ತೀರ್ಪು ಪಡೆಯಲು ಪ್ರಯತ್ನಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.<br /> <br /> ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಎಚ್.ಕೋನರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಳಸಾ–ಬಂಡೂರಿ ನಾಲಾ ಯೋಜನೆಯಿಂದ 7.56 ಟಿಎಂಸಿ ಅಡಿ ನೀರು ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಮಧ್ಯಂತರ ಆದೇಶ ನೀಡಲು ಕೋರಿ ರಾಜ್ಯ ಸರ್ಕಾರ ಮಹಾದಾಯಿ ನ್ಯಾಯಮಂಡಳಿಗೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಇಲ್ಲಿ ಕರೆದಿದ್ದ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ ಮಧ್ಯಂತರ ಆದೇಶಕ್ಕಾಗಿ ಮನವಿ ಸಲ್ಲಿಸುವ ಕುರಿತು ಚರ್ಚೆಯಾಗಿದೆ.<br /> <br /> ಹುಬ್ಬಳ್ಳಿ – ಧಾರವಾಡ, ಬಾಗಲಕೋಟೆ, ಗದಗ, ಬೆಳಗಾವಿ ನಗರ ಹಾಗೂ ಕೆಲವು ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು ರಾಜ್ಯ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.<br /> <br /> ಆದರೆ, ಗೋವಾ ರಾಜ್ಯ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹಾದಾಯಿ ನ್ಯಾಯಮಂಡಳಿ ರಚಿಸಿದ್ದು, ಮಂಡಳಿಯ ಅಧ್ಯಕ್ಷ ಜೆ.ಎಂ.ಪಾಂಚಾಲ್ ನೇತೃತ್ವದ ತಂಡ ವಾಸ್ತವ ಸ್ಥಿತಿ ಅರಿಯಲು ರಾಜ್ಯದಲ್ಲಿ ಪ್ರವಾಸ ಹಮ್ಮಿಕೊಂಡಿದೆ.<br /> <br /> ಮಹಾದಾಯಿ ನದಿಯಲ್ಲಿ ರಾಜ್ಯದ ಪಾಲು 24.15 ಟಿಎಂಸಿ ಅಡಿ ಎಂದು ಕರ್ನಾಟಕ ಹೇಳುತ್ತಿದೆ. ಈ ನದಿ ಮಹಾರಾಷ್ಟ್ರ ಮತ್ತು ಗೋವಾದಲ್ಲೂ ಹರಿಯುತ್ತಿದ್ದು, ಒಟ್ಟಾರೆ ಮೂರೂ ರಾಜ್ಯಗಳಿಗೆ ನೀರು ಹಂಚಿಕೆಯಾಗಬೇಕು.<br /> <br /> ಮಧ್ಯಂತರ ತೀರ್ಪು ಬಂದರೆ ಕೇಂದ್ರ ಜಲ ಆಯೋಗ ಮತ್ತು ಪರಿಸರ ಇಲಾಖೆಯ ಅನುಮತಿ ಪಡೆದು ಕಳಸಾ ಬಳಿ ಡ್ಯಾಂ ನಿರ್ಮಿಸಲು ಅನುಕೂಲವಾಗಲಿದೆ. ಇದು ಅರಣ್ಯದ ವ್ಯಾಪ್ತಿಯಲ್ಲಿ ಬರಲಿದ್ದು, ಡ್ಯಾಂ ನಿರ್ಮಾಣವಾಗದ ಹೊರತು ನಾಲೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡರೂ ನೀರು ಬಳಸಿಕೊಳ್ಳಲು ಆಗುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.<br /> <br /> 2014ರ ಜುಲೈ ವೇಳೆಗೆ ನಾಲೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಮಧ್ಯಂತರ ಆದೇಶ ಬಂದರೆ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದರು. ನ್ಯಾಯ-ಮಂಡಳಿಯ ಮುಂದಿನ ವಿಚಾರಣೆ ಮಾರ್ಚ್ 4ರಂದು ನಡೆಯಲಿದೆ.<br /> <br /> <strong>ತಜ್ಞರೊಂದಿಗೆ ಚರ್ಚೆ:</strong> ಕಾನೂನು ತಜ್ಞರೊಂದಿಗೆ ಚರ್ಚಿಸಿದ ನಂತರ ರಾಜ್ಯದ ನಿಲುವನ್ನು ನ್ಯಾಯಮಂಡಳಿಗೆ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು.<br /> <br /> ನ್ಯಾಯಮಂಡಳಿ ಮುಂದೆ ಸಮರ್ಥವಾಗಿ ವಾದ ಮಂಡನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಂತರರಾಜ್ಯ ಜಲ ವಿವಾದಗಳಲ್ಲಿ ರಾಜ್ಯದ ಪರವಾಗಿ ವಾದ ಮಾಡುತ್ತಿರುವ ಕಾನೂನು ತಂಡದೊಂದಿಗೆ ಈ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.<br /> <br /> ವಿರೋಧ ಪಕ್ಷಗಳ ಮುಖಂಡರಿಂದ ಅನೇಕ ಸಲಹೆಗಳು ಬಂದಿವೆ. ಅವುಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು. ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರದ ನಿಲುವು ಏನಾಗಿರುತ್ತದೆ ಎಂದು ಈಗಲೇ ಹೇಳುವುದು ಕಷ್ಟ ಎಂದರು.<br /> <br /> ಡ್ಯಾಂ ನಿರ್ಮಾಣ ಕಾರ್ಯವನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು. ಪರಿಸರ ಇಲಾಖೆಯ ಅನುಮತಿ ಪಡೆಯಬೇಕು. ಮಧ್ಯಂತರ ತೀರ್ಪು ಪಡೆಯಲು ಪ್ರಯತ್ನಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.<br /> <br /> ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಎಚ್.ಕೋನರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>