<p><strong>ಬೆಳಗಾವಿ:</strong> ಜಿಲ್ಲೆಯ 78 ಸಾವಿರ ಹೆಕ್ಟೇರ್ ಜಮೀನಿನಲ್ಲಿ ₨ 41 ಕೋಟಿ ಬೆಳೆ ಹಾನಿ ಉಂಟಾಗಿರುವ ಪ್ರದೇಶಕ್ಕೆ ಕೇಂದ್ರ ಬರ ಅಧ್ಯಯನ ತಂಡ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.<br /> <br /> ನವದೆಹಲಿಯ ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಕಾಳಸಿಂಗ್ ಹಾಗೂ ಕುಡಿಯುವ ನೀರು ಮತ್ತು ಸ್ಯಾನಿಟೇಶನ್ ಸಚಿವಾಲಯದ ಉಪ ಸಲಹೆಗಾರ ವಿಜಯಕುಮಾರ ಬಾಥ್ಲಾ ತಂಡವು ಪರಿಶೀಲನೆ ನಡೆಸಿತು.<br /> <br /> ಬೈಲಹೊಂಗಲ ತಾಲ್ಲೂಕಿನ-11,912 ಹೆಕ್ಟೇರ್ ಪ್ರದೇಶ, ರಾಮದುರ್ಗ- ತಾಲ್ಲೂಕಿನ 16,622 ಹೆಕ್ಟೇರ್ ಪ್ರದೇಶ, ಸವದತ್ತಿ ತಾಲ್ಲೂಕಿನ 28,017 ಹೆಕ್ಟೇರ್ ಪ್ರದೇಶ, ಚಿಕ್ಕೋಡಿ ತಾಲ್ಲೂಕಿನ- 11,912 ಹೆಕ್ಟೇರ್ ಪ್ರದೇಶ, ಗೋಕಾಕ -6,412, ಹುಕ್ಕೇರಿ -1,835 ಹಾಗೂ ರಾಯಬಾಗ- ತಾಲ್ಲೂಕಿನ 1,863 ಹೆಕ್ಟೇರ್ ಪ್ರದೇಶ ಬರ ಪೀಡಿತ ಪ್ರದೇಶವಾಗಿದೆ. ವಾಡಿಕೆ ಮಳೆಗಿಂತ ಕಡಿಮೆ ಮಳೆ ಬಿದ್ದಿರುವುದರಿಂದ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿ.ಆರ್.ಪಾಟೀಲ ಬರ ಅಧ್ಯಯನ ತಂಡಕ್ಕೆ ತಿಳಿಸಿದರು.<br /> <br /> ಕೇಂದ್ರ ಬರ ಅಧ್ಯಯನ ತಂಡವು ಬೈಲಹೊಂಗಲ ತಾಲ್ಲೂಕಿನ ನೇಸರಗಿ ಹೋಬಳಿಯ ವಣ್ಣೂರ ಹಾಗೂ ಹಣಬರಟ್ಟಿ ಗ್ರಾಮಗಳ ಬೆಳೆ ಹಾನಿ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿತು. ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ ಕುರಿತ ವರದಿಯನ್ನು ಜಿಲ್ಲಾ ಆಡಳಿತವು ಅಧ್ಯಯನ ತಂಡಕ್ಕೆ ಸಲ್ಲಿಸಿತು.<br /> <br /> ‘ಮುಂಗಾರು ಬೆಳೆಗಳಾದ ಶೇಂಗಾ, ಮೆಕ್ಕೆಜೋಳ, ಸೋಯಾಬಿನ್ ಬೆಳೆಗಳ ಬೀಜ, ಗೊಬ್ಬರ ಹಾಕಿ ಬೆಳೆಯಲಾಗುತ್ತಿತ್ತು. ಮುಂಗಾರು ಮಳೆ ಬಾರದ್ದರಿಂದ ಬೆಳೆ ಹಾನಿಯಾಗಿದೆ. ದನಕರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗಾಗಿತೊಂದರೆ ಉಂಟಾಗಿರುತ್ತದೆ. ಈ ಭಾಗಕ್ಕೆ ನೀರಾವರಿಗಾಗಿ ಕಾಲುವೆ ಮಾಡಲಾಗುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಿ ನೀರು ಪೂರೈಕೆ ಮಾಡಬೇಕು’ ಎಂದು ರೈತ ಹಜರತ್ಸಾಬ್ ಅಪ್ಪಾಸಾಹೇಬ ಕಿಲ್ಲೇದಾರ ಮನವಿ ಮಾಡಿದರು.<br /> <br /> ಮಳೆ ಅಭಾವದಿಂದ ಬರ ಪರಿಸ್ಥಿತಿ ಪ್ರತಿ ವರ್ಷ ಇರುತ್ತದೆ. ಬೆಳೆ ಹಾನಿಗೆ ಯೋಗ್ಯ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು.<br /> <br /> ತಂಡದೊಂದಿಗೆ ಜಿಲ್ಲಾಧಿಕಾರಿ ಎನ್.ಜಯರಾಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಾ ಚೋಳನ್, ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ವಿಜಯಕುಮಾರ ಹೊನಕೇರಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ತಂಡದ ಸದಸ್ಯರಿಗೆ ಮಾಹಿತಿ ನೀಡಿದರು.<br /> <br /> <strong>ಸಂಸದ ಅಂಗಡಿ ಮನವಿ: </strong>ಬೆಳಗಾವಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬೈಲಹೊಂಗಲ, ರಾಮದುರ್ಗ ಹಾಗೂ ಸವದತ್ತಿ ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದರಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ದನಕರುಗಳಿಗೆ ಮೇವು, ಕುಡಿಯುವ ನೀರು ಇಲ್ಲದಂತಾಗಿದೆ. ಈ ಭಾಗದ ರೈತರಿಗೆ ಹೆಚ್ಚಿನ ನೆರವಿನ ಅವಶ್ಯಕತೆ ಇದೆ. ಆದ್ದರಿಂದ ವಿಶೇಷ ಆರ್ಥಿಕ ನೆರವು ಒದಗಿಸಬೇಕು ಎಂದು ಬರ ಅಧ್ಯಯನ ತಂಡಕ್ಕೆ ಪ್ರಸ್ತಾವ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯ 78 ಸಾವಿರ ಹೆಕ್ಟೇರ್ ಜಮೀನಿನಲ್ಲಿ ₨ 41 ಕೋಟಿ ಬೆಳೆ ಹಾನಿ ಉಂಟಾಗಿರುವ ಪ್ರದೇಶಕ್ಕೆ ಕೇಂದ್ರ ಬರ ಅಧ್ಯಯನ ತಂಡ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.<br /> <br /> ನವದೆಹಲಿಯ ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಕಾಳಸಿಂಗ್ ಹಾಗೂ ಕುಡಿಯುವ ನೀರು ಮತ್ತು ಸ್ಯಾನಿಟೇಶನ್ ಸಚಿವಾಲಯದ ಉಪ ಸಲಹೆಗಾರ ವಿಜಯಕುಮಾರ ಬಾಥ್ಲಾ ತಂಡವು ಪರಿಶೀಲನೆ ನಡೆಸಿತು.<br /> <br /> ಬೈಲಹೊಂಗಲ ತಾಲ್ಲೂಕಿನ-11,912 ಹೆಕ್ಟೇರ್ ಪ್ರದೇಶ, ರಾಮದುರ್ಗ- ತಾಲ್ಲೂಕಿನ 16,622 ಹೆಕ್ಟೇರ್ ಪ್ರದೇಶ, ಸವದತ್ತಿ ತಾಲ್ಲೂಕಿನ 28,017 ಹೆಕ್ಟೇರ್ ಪ್ರದೇಶ, ಚಿಕ್ಕೋಡಿ ತಾಲ್ಲೂಕಿನ- 11,912 ಹೆಕ್ಟೇರ್ ಪ್ರದೇಶ, ಗೋಕಾಕ -6,412, ಹುಕ್ಕೇರಿ -1,835 ಹಾಗೂ ರಾಯಬಾಗ- ತಾಲ್ಲೂಕಿನ 1,863 ಹೆಕ್ಟೇರ್ ಪ್ರದೇಶ ಬರ ಪೀಡಿತ ಪ್ರದೇಶವಾಗಿದೆ. ವಾಡಿಕೆ ಮಳೆಗಿಂತ ಕಡಿಮೆ ಮಳೆ ಬಿದ್ದಿರುವುದರಿಂದ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿ.ಆರ್.ಪಾಟೀಲ ಬರ ಅಧ್ಯಯನ ತಂಡಕ್ಕೆ ತಿಳಿಸಿದರು.<br /> <br /> ಕೇಂದ್ರ ಬರ ಅಧ್ಯಯನ ತಂಡವು ಬೈಲಹೊಂಗಲ ತಾಲ್ಲೂಕಿನ ನೇಸರಗಿ ಹೋಬಳಿಯ ವಣ್ಣೂರ ಹಾಗೂ ಹಣಬರಟ್ಟಿ ಗ್ರಾಮಗಳ ಬೆಳೆ ಹಾನಿ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿತು. ಜಿಲ್ಲೆಯಲ್ಲಿ ಸಂಭವಿಸಿದ ಬೆಳೆ ಹಾನಿ ಕುರಿತ ವರದಿಯನ್ನು ಜಿಲ್ಲಾ ಆಡಳಿತವು ಅಧ್ಯಯನ ತಂಡಕ್ಕೆ ಸಲ್ಲಿಸಿತು.<br /> <br /> ‘ಮುಂಗಾರು ಬೆಳೆಗಳಾದ ಶೇಂಗಾ, ಮೆಕ್ಕೆಜೋಳ, ಸೋಯಾಬಿನ್ ಬೆಳೆಗಳ ಬೀಜ, ಗೊಬ್ಬರ ಹಾಕಿ ಬೆಳೆಯಲಾಗುತ್ತಿತ್ತು. ಮುಂಗಾರು ಮಳೆ ಬಾರದ್ದರಿಂದ ಬೆಳೆ ಹಾನಿಯಾಗಿದೆ. ದನಕರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗಾಗಿತೊಂದರೆ ಉಂಟಾಗಿರುತ್ತದೆ. ಈ ಭಾಗಕ್ಕೆ ನೀರಾವರಿಗಾಗಿ ಕಾಲುವೆ ಮಾಡಲಾಗುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಿ ನೀರು ಪೂರೈಕೆ ಮಾಡಬೇಕು’ ಎಂದು ರೈತ ಹಜರತ್ಸಾಬ್ ಅಪ್ಪಾಸಾಹೇಬ ಕಿಲ್ಲೇದಾರ ಮನವಿ ಮಾಡಿದರು.<br /> <br /> ಮಳೆ ಅಭಾವದಿಂದ ಬರ ಪರಿಸ್ಥಿತಿ ಪ್ರತಿ ವರ್ಷ ಇರುತ್ತದೆ. ಬೆಳೆ ಹಾನಿಗೆ ಯೋಗ್ಯ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದರು.<br /> <br /> ತಂಡದೊಂದಿಗೆ ಜಿಲ್ಲಾಧಿಕಾರಿ ಎನ್.ಜಯರಾಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಾ ಚೋಳನ್, ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ವಿಜಯಕುಮಾರ ಹೊನಕೇರಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ತಂಡದ ಸದಸ್ಯರಿಗೆ ಮಾಹಿತಿ ನೀಡಿದರು.<br /> <br /> <strong>ಸಂಸದ ಅಂಗಡಿ ಮನವಿ: </strong>ಬೆಳಗಾವಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬೈಲಹೊಂಗಲ, ರಾಮದುರ್ಗ ಹಾಗೂ ಸವದತ್ತಿ ತಾಲ್ಲೂಕುಗಳಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದರಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ದನಕರುಗಳಿಗೆ ಮೇವು, ಕುಡಿಯುವ ನೀರು ಇಲ್ಲದಂತಾಗಿದೆ. ಈ ಭಾಗದ ರೈತರಿಗೆ ಹೆಚ್ಚಿನ ನೆರವಿನ ಅವಶ್ಯಕತೆ ಇದೆ. ಆದ್ದರಿಂದ ವಿಶೇಷ ಆರ್ಥಿಕ ನೆರವು ಒದಗಿಸಬೇಕು ಎಂದು ಬರ ಅಧ್ಯಯನ ತಂಡಕ್ಕೆ ಪ್ರಸ್ತಾವ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>