<p>ಮೈಸೂರು: ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8,000 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವ ಶಿಕ್ಷಣ ಇಲಾಖೆ ನಿರ್ಧಾರ ಖಂಡನೀಯ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಹೇಳಿದೆ.<br /> <br /> ರಾಜ್ಯದಾದ್ಯಂತ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಆದರೆ, ಸರ್ಕಾರ ಕಳೆದ ಎರಡು ವರ್ಷಗಳಿಂದ ಶಿಕ್ಷಕರ ನೇಮಕಾತಿ ಮಾಡದೇ ಇದೀಗ ಇದ್ದಕ್ಕಿದ್ದಂತೆ ಎಚ್ಚೆತ್ತುಕೊಂಡು ಅತಿಥಿ ಶಿಕ್ಷಕರ ನೇಮಕ ಮಾಡಲು ತೀರ್ಮಾನಿಸಿದೆ. ಮೇಲ್ನೋಟಕ್ಕೆ ಈ ನಿರ್ಧಾರ ಉದ್ಯೋಗ ನೀಡುವ ಕ್ರಮ ಎನಿಸಿದರೂ, ಕಾಯಂ ಉದ್ಯೋಗದ ಪರಿಕಲ್ಪನೆಯನ್ನು ನಾಶ ಮಾಡಿ, ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವ ಹುನ್ನಾರ ಅಡಗಿದೆ ಎಂದು ದೂರಿದೆ.<br /> <br /> ಪ್ರಸಕ್ತ ಸಂದರ್ಭದಲ್ಲಿ ಸಮಯಾವಕಾಶ ಸಾಲದು. ಆದ್ದರಿಂದ ಹಂಗಾಮಿಯಾಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬ ಸರ್ಕಾರದ ವಾದ ಪೊಳ್ಳುತನದಿಂದ ಕೂಡಿದೆ. ಒಂದೇ ಶಾಲೆಯಲ್ಲಿ ಕೆಲಸ ನಿರ್ವಹಿಸುವ ಚಿತ್ರಕಲೆ, ದೈಹಿಕ ಶಿಕ್ಷಣ, ಹೊಲಿಗೆ, ತೋಟಗಾರಿಕೆ ತರಬೇತಿ ನೀಡುವ ಶಿಕ್ಷಕರಿಗೆ ಮೂರು ಶಾಲೆಗಳನ್ನು ವಹಿಸಿ, ತಿಂಗಳಿಗೆ 5 ಸಾವಿರ ರೂಪಾಯಿ ವೇತನ ನಿಗದಿ ಪಡಿಸಿರುವ ಕ್ರಮದ ಹಿಂದೆ ಅವರನ್ನು ತೀವ್ರವಾಗಿ ಶೋಷಿಸುವ ಕುತಂತ್ರ ಅಡಗಿದೆ. ಅಲ್ಲದೆ, ಶಾಲಾ ಮುಖ್ಯೋಪಾಧ್ಯಾಯರಿಗೆ ನೇಮಕ ಅಧಿಕಾರ ನೀಡುವುದರಿಂದ ಹಲವು ಅಕ್ರಮ, ಸ್ವಜನ ಪಕ್ಷಪಾತಗಳಿಗೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ, ಸರ್ಕಾರ ಕೂಡಲೇ ಈ ನಿರ್ಧಾರವನ್ನು ವಾಪಸು ತೆಗೆದುಕೊಳ್ಳಬೇಕು ಎಂದು ಸಂಘಟನೆ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಠಿ ಆಗ್ರಹಿಸಿದ್ದಾರೆ.<br /> <br /> <strong>ತರಬೇತಿಗೆ ನೇರ ಸಂದರ್ಶನ</strong><br /> ರುಡ್ ಸೆಟ್ ಸಂಸ್ಥೆ 30 ದಿನಗಳ ಕಾಲ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿ ತರಬೇತಿಯನ್ನು ಹಮ್ಮಿಕೊಂಡಿದೆ.<br /> <br /> ಸೆ.5 ರಿಂದ 10ರವರೆಗೂ ನೇರ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ. ಮೋಟಾರ್ ರೀವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿಯಲ್ಲಿ ಪ್ರಾಥಮಿಕ ಜ್ಞಾನವನ್ನು ಹೊಂದಿದವರಿಗೆ ಆದ್ಯತೆ. ಈ ತರಬೇತಿಗೆ ಭಾಗವಹಿಸಲು ಇಚ್ಚಿಸುವ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ 18 ರಿಂದ 45 ವರುಷದ ಒಳಗಿನ ಅರ್ಹ ನಿರುದ್ಯೋಗಿ ಯುವಕರು ನೇರ ಸಂದರ್ಶನದಲ್ಲಿ ಕಚೇರಿಯ ಸಮಯದಲ್ಲಿ ಭಾಗವಹಿಸಬಹುದಾಗಿದೆ.<br /> <br /> ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಮುಖ್ಯ ರಸ್ತೆ, ಹಿನಕಲ್, ಮೈಸೂರು 570017 ಅಥವಾ ದೂರವಾಣಿ ಸಂಖ್ಯೆ 0821-2519663, ಮೊಬೈಲ್ 9449860466, 8884554510 ಸಂಪರ್ಕಿಸಿ ಪಡೆಯಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8,000 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವ ಶಿಕ್ಷಣ ಇಲಾಖೆ ನಿರ್ಧಾರ ಖಂಡನೀಯ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಹೇಳಿದೆ.<br /> <br /> ರಾಜ್ಯದಾದ್ಯಂತ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಆದರೆ, ಸರ್ಕಾರ ಕಳೆದ ಎರಡು ವರ್ಷಗಳಿಂದ ಶಿಕ್ಷಕರ ನೇಮಕಾತಿ ಮಾಡದೇ ಇದೀಗ ಇದ್ದಕ್ಕಿದ್ದಂತೆ ಎಚ್ಚೆತ್ತುಕೊಂಡು ಅತಿಥಿ ಶಿಕ್ಷಕರ ನೇಮಕ ಮಾಡಲು ತೀರ್ಮಾನಿಸಿದೆ. ಮೇಲ್ನೋಟಕ್ಕೆ ಈ ನಿರ್ಧಾರ ಉದ್ಯೋಗ ನೀಡುವ ಕ್ರಮ ಎನಿಸಿದರೂ, ಕಾಯಂ ಉದ್ಯೋಗದ ಪರಿಕಲ್ಪನೆಯನ್ನು ನಾಶ ಮಾಡಿ, ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುವ ಹುನ್ನಾರ ಅಡಗಿದೆ ಎಂದು ದೂರಿದೆ.<br /> <br /> ಪ್ರಸಕ್ತ ಸಂದರ್ಭದಲ್ಲಿ ಸಮಯಾವಕಾಶ ಸಾಲದು. ಆದ್ದರಿಂದ ಹಂಗಾಮಿಯಾಗಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬ ಸರ್ಕಾರದ ವಾದ ಪೊಳ್ಳುತನದಿಂದ ಕೂಡಿದೆ. ಒಂದೇ ಶಾಲೆಯಲ್ಲಿ ಕೆಲಸ ನಿರ್ವಹಿಸುವ ಚಿತ್ರಕಲೆ, ದೈಹಿಕ ಶಿಕ್ಷಣ, ಹೊಲಿಗೆ, ತೋಟಗಾರಿಕೆ ತರಬೇತಿ ನೀಡುವ ಶಿಕ್ಷಕರಿಗೆ ಮೂರು ಶಾಲೆಗಳನ್ನು ವಹಿಸಿ, ತಿಂಗಳಿಗೆ 5 ಸಾವಿರ ರೂಪಾಯಿ ವೇತನ ನಿಗದಿ ಪಡಿಸಿರುವ ಕ್ರಮದ ಹಿಂದೆ ಅವರನ್ನು ತೀವ್ರವಾಗಿ ಶೋಷಿಸುವ ಕುತಂತ್ರ ಅಡಗಿದೆ. ಅಲ್ಲದೆ, ಶಾಲಾ ಮುಖ್ಯೋಪಾಧ್ಯಾಯರಿಗೆ ನೇಮಕ ಅಧಿಕಾರ ನೀಡುವುದರಿಂದ ಹಲವು ಅಕ್ರಮ, ಸ್ವಜನ ಪಕ್ಷಪಾತಗಳಿಗೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ, ಸರ್ಕಾರ ಕೂಡಲೇ ಈ ನಿರ್ಧಾರವನ್ನು ವಾಪಸು ತೆಗೆದುಕೊಳ್ಳಬೇಕು ಎಂದು ಸಂಘಟನೆ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಠಿ ಆಗ್ರಹಿಸಿದ್ದಾರೆ.<br /> <br /> <strong>ತರಬೇತಿಗೆ ನೇರ ಸಂದರ್ಶನ</strong><br /> ರುಡ್ ಸೆಟ್ ಸಂಸ್ಥೆ 30 ದಿನಗಳ ಕಾಲ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿ ತರಬೇತಿಯನ್ನು ಹಮ್ಮಿಕೊಂಡಿದೆ.<br /> <br /> ಸೆ.5 ರಿಂದ 10ರವರೆಗೂ ನೇರ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ. ಮೋಟಾರ್ ರೀವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿಯಲ್ಲಿ ಪ್ರಾಥಮಿಕ ಜ್ಞಾನವನ್ನು ಹೊಂದಿದವರಿಗೆ ಆದ್ಯತೆ. ಈ ತರಬೇತಿಗೆ ಭಾಗವಹಿಸಲು ಇಚ್ಚಿಸುವ ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ 18 ರಿಂದ 45 ವರುಷದ ಒಳಗಿನ ಅರ್ಹ ನಿರುದ್ಯೋಗಿ ಯುವಕರು ನೇರ ಸಂದರ್ಶನದಲ್ಲಿ ಕಚೇರಿಯ ಸಮಯದಲ್ಲಿ ಭಾಗವಹಿಸಬಹುದಾಗಿದೆ.<br /> <br /> ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಮುಖ್ಯ ರಸ್ತೆ, ಹಿನಕಲ್, ಮೈಸೂರು 570017 ಅಥವಾ ದೂರವಾಣಿ ಸಂಖ್ಯೆ 0821-2519663, ಮೊಬೈಲ್ 9449860466, 8884554510 ಸಂಪರ್ಕಿಸಿ ಪಡೆಯಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>