ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.13ರಿಂದ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್‌ಷಿಪ್

Last Updated 26 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಉಡುಪಿ: ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ಕಾರ್ಪೊರೇಶನ್ ಬ್ಯಾಂಕ್ ಪ್ರಾಯೋಜಿತ 28ನೇ  ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್‌ಷಿಪ್ ನಡೆಯಲಿವೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ರಘುಪತಿ ಭಟ್, ಈ ಕೂಟದಲ್ಲಿ  ರಾಜ್ಯದ 30 ಜ್ಲ್ಲಿಲೆಗಳ, ಡಿವೈಎಸ್‌ಎಸ್, ಭಾರತ ಕ್ರೀಡಾ ಪ್ರಾಧಿಕಾರ ತಂಡದ ಸುಮಾರು ಎರಡು ಸಾವಿರ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಪ್ ಬ್ಯಾಂಕ್ ಕ್ರೀಡಾಕೂಟಕ್ಕೆ ರೂ.10 ಲಕ್ಷ ನೆರವು ನೀಡಿದೆ ಎಂದರು.

ಮೂರು ದಿಗಳ ಈ ಕ್ರೀಡಾಕೂಟದಲ್ಲಿ 240 ಸ್ಪರ್ಧೆಗಳು ನಡೆಯಲಿವೆ. ಪ್ರವೇಶ ಪತ್ರಗಳು ಹಾಗೂ ಸ್ಪರ್ಧೆಗಳ ಬಗ್ಗೆ ಮಾಹಿತಿಯನ್ನು ರಾಜ್ಯ ಅಥ್ಲೆಟಿಕ್ ಸ್ಪರ್ಧೆಯು ಈಗಾಗಲೇ ಎಲ್ಲ ಜಿಲ್ಲಾ ಸಂಸ್ಥೆಗಳಿಗೆ ರವಾನಿಸಿದೆ. ಅ.13ರಂದು ಸಂಜೆ ಉದ್ಘಾಟನೆಯೊಂದಿಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಕ್ರೀಡಾಕೂಟದಲ್ಲಿ ಮಾಜಿ ಅಂತರರಾಷ್ಟ್ರೀಯ ಓಟಗಾರ್ತಿ ಅಶ್ವಿನಿ ನಾಚಪ್ಪ ಸೇರಿದಂತೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕ್ರೀಡಾಕೂಟಕ್ಕೆ ಪೂರ್ವ ತಯಾರಿಯಾಗಿ ಕ್ರೀಡಾಂಗಣದ ಸಿದ್ಧತಾ ಕಾರ್ಯ ನಡೆದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT