`ರವೆ ಉಂಡೆ, ರಾಗಿ, ಅಕ್ಕಿ ಪಾಯಸ, ಅವಲಕ್ಕಿ ಮಿಶ್ರಣ, ಪುಳಿಯೋಗರೆ, ಚಿತ್ರಾನ್ನ, ಅನ್ನ ಸಂಬಾರು ಇತ್ಯಾದಿಗಳನ್ನು ಮಕ್ಕಳಿಗೆ ನೀಡಲಾಗುವುದು. ಇದರ ಜೊತೆಗೆ ಚಪಾತಿ, ರಾಗಿಮುದ್ದೆಯನ್ನು ಗರ್ಭಿಣಿ, ಬಾಣಂತಿಯರಿಗೆ ನೀಡುತ್ತೇವೆ~ ಎಂದು ತಿಳಿಸಿದರು.
ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ದೃಷ್ಟಿಯಿಂದ ತುಮಕೂರು ಜಿಲ್ಲೆಯ ಹತ್ತು ಅಂಗನವಾಡಿ ಕೇಂದ್ರಗಳಲ್ಲಿ `ಸ್ಪಿರುಲಿನ~ ಮಾತ್ರೆಯನ್ನು ಉಚಿತವಾಗಿ ಎರಡು ತಿಂಗಳ ಕಾಲ ನೀಡಲಾಗುತ್ತದೆ. ಇದರ ಫಲಿತಾಂಶವನ್ನು ಆಧರಿಸಿ ಬೇರೆ ಕಡೆಗೂ ವಿಸ್ತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
2009-10ನೇ ಸಾಲಿನವರೆಗಿನ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಾಂಡ್ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.