ಬೆಂಗಳೂರು: ‘ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಿಂದ ಇದೇ 13ರಿಂದ 15ರವರೆಗೆ ಅಂಗರಚನಾಶಾಸ್ತ್ರದ 15ನೇ ರಾಜ್ಯಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ’ ಎಂದು ಸಪ್ತಗಿರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲೆ ಡಾ.ಜಯಂತಿ ತಿಳಿಸಿದರು.
ಹೆಸರಘಟ್ಟ ಮುಖ್ಯರಸ್ತೆ ಬಳಿಯ ಚಿಕ್ಕಸಂದ್ರದ ಸಪ್ತಗಿರಿ ವೈದ್ಯಕೀಯ ವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನವಿ.ವಿ ಕುಲಪತಿ ಶ್ರೀಪ್ರಕಾಶ್ ಸಮ್ಮೇಳನ ಉದ್ಘಾಟಿಸುವರು ಎಂದರು. ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳ 500ಕ್ಕೂ ಹೆಚ್ಚು ಅಂಗರಚನಾ ಶಾಸ್ತ್ರದ ವೈದ್ಯರು, ಪ್ರಾಧ್ಯಾಪಕರು ಭಾಗವಹಿಸಲಿದ್ದಾರೆ. 300ಕ್ಕೂ ಸಂಶೋಧನಾ ಪ್ರಬಂಧಗಳು ಮಂಡನೆಯಾಗಲಿವೆ.