ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ಮೆರವಣಿಗೆ ಬಿ.ಬಿ.ರಸ್ತೆ, ಬಜಾರ್ ರಸ್ತೆ, ನಗರಸಭೆ ವೃತ್ತ, ಗಂಗಮ್ಮಗುಡಿ ರಸ್ತೆ, ಎಂ.ಜಿ.ರಸ್ತೆ, ಶಿಡ್ಲಘಟ್ಟ ವೃತ್ತದ ಮೂಲಕ ಸಾಗಿತು. ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಫರಿಷ್ತಾ, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಮರಾಜ್ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ, ಎಪಿಡಿ ಸಂಸ್ಥೆಯ ಸಂಯೋಜಕರಾದ ಲಿಂಗಪ್ಪ, ಉಷಾರಾಣಿ ಇತರರು ರ್ಯಾಲಿಯಲ್ಲಿ ಭಾಗವಹಿಸಿದ್ದರು.