ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲನಿಂದ ನಾಮಪತ್ರ ಸಲ್ಲಿಕೆ

Last Updated 19 ಏಪ್ರಿಲ್ 2013, 5:59 IST
ಅಕ್ಷರ ಗಾತ್ರ

ಮಳವಳ್ಳಿ: ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಗವಿಕಲ ವ್ಯಕ್ತಿಯೊಬ್ಬ ಪಕ್ಷೇತರ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು. 

ಪಟ್ಟಣದ ಕೀರ್ತಿನಗರದ ನಿವಾಸಿ ಮುತ್ತಯ್ಯ, ಕಮಲಮ್ಮ ದಂಪತಿ ಹಿರಿಯ ಪುತ್ರ ಎಂ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಸ್ನಾತಕೋತ್ತರ ಪದವೀಧರರಾಗಿದ್ದು, ಹುಟ್ಟಿದ ಎರಡು ವರ್ಷಗಳ ನಂತರ ಪೋಲಿಯೊದಿಂದ ಕಾಲು ಕಳೆದುಕೊಂಡಿದ್ದಾರೆ.
`ಯಾವ ಜನಪ್ರತಿನಿಧಿಯೂ ಅಂಗವಿಕಲರ ಬಗ್ಗೆ ಗಮನ ನೀಡುತ್ತಿಲ್ಲ. ಅಂಗವಿಕಲರ ನೂರಾರು ಸಮಸ್ಯೆಗಳು ಪರಿಹರಿಸಿಲ್ಲ.

ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ದುಡಿದು ಶಾಸಕನಾಗಿ ಆಯ್ಕೆಯಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT