ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅಂಗವಿಕಲರಲ್ಲಿ ಆತ್ಮವಿಶ್ವಾಸ ಬಿತ್ತಿ'

Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಅಂಗವಿಕಲರಲ್ಲೂ ಆತ್ಮವಿಶ್ವಾಸ ಬಿತ್ತುವ ಕಾರ್ಯ ಮಾಡಿದಾಗ ಮಾತ್ರ ಏಳಿಗೆ ಸಾಧ್ಯ' ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ತಿಮ್ಮೇಗೌಡ ತಿಳಿಸಿದರು.

ಬೆಂಗಳೂರು ವಿಶ್ವವಿದ್ಯಾಲಯವು ಸೆಂಟ್ರಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಅಂಧ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

`ದೈಹಿಕ ನ್ಯೂನತೆಗಳು ಯಶಸ್ಸು ಗಳಿಸಲು ಅಡ್ಡಿಯಾಗುವುದಿಲ್ಲ ಎಂಬ ಅಂಶವನ್ನು ಎಲ್ಲರೂ ಮನಗಾಣಬೇಕು' ಎಂದು ಅಭಿಪ್ರಾಯಪಟ್ಟರು.

`ಅಂಧರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮತ್ತು ಉದ್ಯೋಗ ಕೌಶಲಗಳನ್ನು ಕಲಿಸುವ ದೃಷ್ಟಿಗೆ ಪೂರಕವಾಗಿ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು' ಎಂದು ತಿಳಿಸಿದರು.

ರಿಜಿಸ್ಟ್ರಾರ್ ಪ್ರೊ. ಕೆ.ಸೀತಮ್ಮ, `ದೈಹಿಕ ನ್ಯೂನತೆಯಿಂದ ಅಂಧರು ಧೃತಿಗೆಡಬೇಕಿಲ್ಲ. ನಿರಂತರ ಅಭ್ಯಾಸದಿಂದ ಉದ್ಯೋಗ ಕೌಶಲಗಳನ್ನು ರೂಢಿಸಿಕೊಂಡು ಉನ್ನತ ಮಟ್ಟಕ್ಕೆ ಏರಬಹುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT