ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ ಕೃಷಿ ವಿವಿ ಕ್ರೀಡಾಕೂಟ: ಗೌತಮಿಗೆ ಐದು ಚಿನ್ನ

Last Updated 22 ಫೆಬ್ರುವರಿ 2011, 18:10 IST
ಅಕ್ಷರ ಗಾತ್ರ

ಬೆಂಗಳೂರು: ಗೌತಮಿ. ಆರ್ ಭಾಸ್ಕರ್ ಅವರು ಕೇರಳ ಕೃಷಿ ವಿವಿ ಆಶ್ರಯದಲ್ಲಿ ತ್ರಿಶೂರ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಅಂತರ ಕೃಷಿ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಐದು ಚಿನ್ನದ ಪದಕ ಗೆದ್ದುಕೊಂಡು ಗಮನ ಸೆಳೆದರು. ಗೌತಮಿ ಅವರ ಶ್ರೇಷ್ಠ ಪ್ರದರ್ಶನದಿಂದಾಗಿ ಬೆಂಗಳೂರು ಕೃಷಿ ವಿವಿ ತಂಡ ಕೂಟದಲ್ಲಿ ರನ್ನರ್ಸ್‌ ಅಪ್ ಸ್ಥಾನ ಪಡೆಯಿತು.

ಇತ್ತೀಚೆಗೆ  ನಡೆದ ಕ್ರೀಡಾಕೂಟದಲ್ಲಿ ದೇಶದ ವಿವಿಧ ರಾಜ್ಯಗಳ ಒಟ್ಟು 40 ತಂಡಗಳು ಪಾಲ್ಗೊಂಡಿದ್ದವು. ಗೌತಮಿ ಐದು ಬಂಗಾರ ಗೆದ್ದುಕೊಂಡು ಮಹಿಳೆಯರ ವಿಭಾಗದಲ್ಲಿ ‘ವೈಯಕ್ತಿಕ ಚಾಂಪಿಯನ್’ ಎನಿಸಿಕೊಂಡರು. ಒಟ್ಟು 40 ಸ್ಪರ್ಧಿಗಳು ಬೆಂಗಳೂರು ಕೃಷಿ ವಿವಿ ತಂಡವನ್ನು ಪ್ರತಿನಿಧಿಸಿದ್ದರು.

ವಾಲಿಬಾಲ್‌ನಲ್ಲಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಬೆಂಗಳೂರು ತಂಡ ಚಾಂಪಿಯನ್ ಆಯಿತು. ಅಥ್ಲೆಟಿಕ್ಸ್‌ನಲ್ಲಿ ಮಹಿಳೆಯರ ವಿಭಾಗದ ಸಮಗ್ರ ಪ್ರಶಸ್ತಿಯೂ ಬೆಂಗಳೂರು ತಂಡ ತನ್ನದಾಗಿಸಿಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT