ಬೆಂಗಳೂರು: ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವೆಬ್ಸೈಟ್ ಅನ್ನು ಕಂದಾಯ ಸಚಿವರೂ ಆದ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೋಮವಾರ ವಿಧಾನಸೌಧದಲ್ಲಿ ಉದ್ಘಾಟಿಸಿದರು.
ರಾಜ್ಯದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸಂಭವಿಸಿದ ನಂತರ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಕುರಿತು ವೆಬ್ಸೈಟ್ನಲ್ಲಿ ಮಾಹಿತಿ, ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಬೇಕಾದವರ ವಿಳಾಸ, ದೂರವಾಣಿ ಸಂಖ್ಯೆ ನೀಡಲಾಗಿದೆ ಎಂದರು.
ವೆಬ್ಸೈಟ್ ವಿಳಾಸ: www.ksdma.co.in