ಬೆಂಗಳೂರು: ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಮತ್ತು ವಿಶ್ವೇಶ್ವರಯ್ಯ ಗೋಪುರದ ಸರ್ಕಾರಿ ಕಚೇರಿಗಳಲ್ಲಿನ ಕಂಪ್ಯೂಟರ್ಗಳಲ್ಲಿ ಸಾಮಾಜಿಕ ಜಾಲ ತಾಣ ಮತ್ತು ಆನ್ಲೈನ್ ಶಾಪಿಂಗ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸರ್ಕಾರಿ ನೌಕರರು ಕಚೇರಿ ಅವಧಿಯಲ್ಲಿ ಸಾಮಾಜಿಕ ಜಾಲ ತಾಣಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ ಎಂಬ ದೂರುಗಳು ಇತ್ತೀಚಿಗೆ ಕೇಳಿ ಬಂದಿದ್ದವು.
ಇದನ್ನು ಆಧರಿಸಿ ಇ – ಆಡಳಿತ ಇಲಾಖೆ ಈ ಕ್ರಮಕೈಗೊಂಡಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಇ – ಆಡಳಿತ ಇಲಾಖೆ ಈ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.