`ಪ್ರಕರಣದ ಇತರೆ ಆರೋಪಿಗಳಾದ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಅಳಿಯ ಸೋಹನ್ಕುಮಾರ್ ಮಹತ್ವದ ದಾಖಲೆಗಳನ್ನು ಫೋರ್ಜರಿ ಮಾಡಿ ತಪ್ಪು ಮಾಡಿದ್ದಾರೆ. ಕೇಂದ್ರೀಯ ಉನ್ನತಾಧಿಕಾರ ಸಮಿತಿ (ಸಿಇಸಿ) ಶಿಫಾರಸಿನಂತೆ ತನಿಖೆ ನಡೆಸಿದ ಸಿಬಿಐ, ದೂರುದಾರರ ಆರೋಪಗಳನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹ' ಎಂದರು. `ಆರೋಪಿಗಳು ಗಳಿಸಿದ ಅಕ್ರಮ ಹಣ ಚುನಾವಣೆಗೆ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ' ಎಂದೂ ಕಳವಳ ವ್ಯಕ್ತಪಡಿಸಿದರು.