ಸಿಬಿಐ ವಿಶೇಷ ನ್ಯಾಯಾಲಯವು ಶ್ರೀಲಕ್ಷ್ಮಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಪುರಸ್ಕರಿಸಿ, ರೂ 25 ಸಾವಿರ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಇಬ್ಬರು ವ್ಯಕ್ತಿಗಳ ಖಾತರಿ ಆಧಾರದಲ್ಲಿ ಅವರಿಗೆ ಡಿಸೆಂಬರ್ 2 ರಂದು ಜಾಮೀನು ನೀಡಿತ್ತು. ಸಿಬಿಐನ ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತನಿಖಾ ಸಂಸ್ಥೆ ಹೈಕೋರ್ಟಿನಲ್ಲಿ ಪ್ರಕರಣ ದಾಖಲಿಸಿತ್ತು.
ಪ್ರಕರಣದ ತನಿಖೆ ಇನ್ನೂ ವಿಚಾರಣೆಯ ಹಂತದಲ್ಲಿದ್ದು, ಜಾಮೀನು ಪಡೆದಿರುವ ಐಎಎಸ್ ಅಧಿಕಾರಿ ವಿಚಾರಣೆಯಲ್ಲಿ ತಮ್ಮ ಪ್ರಭಾವ ಬೀರಬಹುದು, ಇದಲ್ಲದೇ ಇತರೆ ಆಪಾದಿತರೂ ಇನ್ನೂ ಜೈಲಿನಲ್ಲಿದ್ದಾರೆ ಎಂಬ ಸಿಬಿಐನ ವಾದವನ್ನು ಎತ್ತಿ ಹಿಡಿದ ಹೈಕೋರ್ಟ್, ಐಎಎಸ್ ಅಧಿಕಾರಿ ಶ್ರೀಲಕ್ಷ್ಮಿ ಅವರ ಜಾಮೀನನ್ನು ರದ್ದುಪಡಿಸಿದೆ.