ಪ್ರಾಂತ ರೈತ ಸಂಘದ ಜೊತೆಗೆ ಸಿಪಿಎಂ ಹಾಗೂ ಸಿಐಟಿಯು ಸಂಘಟನೆಗಳು ಒಂದಾಗಿ ಕಾದಲವೇಣಿ ಗ್ರಾಮದ ನಿವೇಶನ ರಹಿತರಿಗೆ ನಿವೇಶನಗಳು ದೊರೆಯುವವರಗೂ ತಾಲ್ಲೂಕು ಕಚೇರಿಯಿಂದ ಕದಲುವುದಿಲ್ಲ ಎಂದು ಸಿಪಿಎಂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಗಂಗಪ್ಪ ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ತಾಲ್ಲೂಕು ಕೃಷಿ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಸಿ.ಸಿ.ಅಶ್ವತ್ಥಪ್ಪ, ಪ್ರಾಂತ ರೈತ ಸಂಘ ಅಧ್ಯಕ್ಷ ರವಿಚಂದ್ರರೆಡ್ಡಿ, ನಾಗರತ್ನಮ್ಮ, ಸಿದ್ದಗಂಗಮ್ಮ, ಮಂಜಮ್ಮ ಮತ್ತಿತರರು ಪಾಲ್ಗೊಂಡಿದ್ದರು.