ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಚಟುವಟಿಕೆಗಳ ತಾಣ: ದೂರು

Last Updated 3 ಸೆಪ್ಟೆಂಬರ್ 2013, 19:25 IST
ಅಕ್ಷರ ಗಾತ್ರ

ಬೆಂಗಳೂರು: `ಭದ್ರತಾ ಲೋಪ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದೆ' ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಉಚ್ಛಾಧಿಕಾರಿ ಸಮಿತಿಯ ಅಧ್ಯಕ್ಷ ಡಾ.ಸಂತೋಷ್‌ರಾಯ್ ದೂರಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಕಾರಾಗೃಹದ ಒಳಗೆ ಹಣ, ಮಾದಕ ವಸ್ತು, ಮೊಬೈಲ್‌ನಂತಹ ವಸ್ತುಗಳು ಅಕ್ರಮವಾಗಿ ರವಾನೆಯಾಗುತ್ತಿವೆ. ಗಂಭೀರ ಆರೋಪದ ಕೈದಿಗಳು ಕಾರಾಗೃಹದಲ್ಲಿ ಇರುವುದರಿಂದ ಈ ರೀತಿಯ ನಿರ್ಲಕ್ಷ ಇನ್ನಷ್ಟು ಅಪಾಯಕ್ಕೆ ಎಡೆಮಾಡಿಕೊಡುತ್ತದೆ. ಜೈಶಂಕರ್ ಕಾರಾಗೃಹದಿಂದ ಪರಾರಿಯಾಗಲು ಸಹ ಭದ್ರತಾ ವ್ಯವಸ್ಥೆಯಲ್ಲಿನ ನಿರ್ಲಕ್ಷ್ಯವೇ ಕಾರಣ. ಕೂಡಲೇ ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT