ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳುಗಾರಿಕೆ ನಿಯಂತ್ರಣಕ್ಕೆ ಅರೆಸೇನಾಪಡೆ!

Last Updated 19 ಡಿಸೆಂಬರ್ 2013, 8:26 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಜಿಲ್ಲೆಯಲ್ಲಿ ಅಕ್ರಮ­ವಾಗಿ ನಡೆಯುತ್ತಿರುವ ಮರಳುಗಾರಿಕೆ ನಿಯಂತ್ರಣಕ್ಕೆ ಮುಂದಾಗುವ ಅಧಿಕಾರಿ­ಗಳ ಮೇಲೆ ಹಾಗೂ ವರದಿ ಮಾಡಲು ತೆರಳುವ ಸುದ್ದಿ ಮಾಧ್ಯಮ­ದವರ ಮೈ ಮೇಲೆ ವಾಹನವನ್ನೇ ಚಲಾಯಿಸುವ ದುಷ್ಕೃತ್ಯಕ್ಕೆ ಮುಂದಾಗುವ ಶಕ್ತಿಗಳನ್ನು ಮಟ್ಟಹಾಕಲು ಅಗತ್ಯಬಿದ್ದರೆ ಅರೆಸೇನಾಪಡೆ ನಿಯೋಜಿಸಲು ಹಿಂದೇಟು ಹಾಕುವುದಿಲ್ಲ’
ಹೀಗೆಂದು ಹೇಳಿದ­ವರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಪಾಟೀಲ.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗ­ಣದಲ್ಲಿ ಬುಧವಾರ ನಡೆದ ಚಾಲುಕ್ಯ ಉತ್ಸವ ಪೂರ್ವಸಿದ್ಧತೆ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯಲು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಏಕೆ ಎಂಬ ಮಾಧ್ಯಮದವರ ಪ್ರಶ್ನೆಗೆ ತಮ್ಮ ಎಂದಿನ ಬದ್ಧತೆ ಪ್ರದರ್ಶಿಸುವ ಭರದಲ್ಲಿ ಸಚಿವರು ಅರೆಸೇನಾಪಡೆ ತರಿಸುವು­ದಾಗಿ ಹೇಳುವ ಮೂಲಕ ಎಲ್ಲರನ್ನೂ ನಿಬ್ಬೆರಗಾಗಿಸಿದರು.

ಅಕ್ರಮ ಮರಳುಗಾರಿಕೆಯಲ್ಲಿ ಪ್ರಭಾವಿ ರಾಜಕಾರಣಿಗಳ ಕೈವಾಡ ಇರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ದೊಡ್ಡ ದೊಡ್ಡ ಮಾಫಿಯಾಗಳ ಹಿಂದೆ ದೊಡ್ಡ ದೊಡ್ಡ ರಾಜಕಾರಣಿಗಳ ಕೈವಾಡವಿರು­ವುದು ಸಹಜ. ಆದರೆ, ಜಿಲ್ಲೆಯಲ್ಲಿ ಅದೆಷ್ಟೇ ದೊಡ್ಡ ರಾಜಕಾರಣಿಯಿರಲಿ, ಅಧಿಕಾರಿ ಇರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಚ್‌.ವೈ. ಮೇಟಿ, ಗೋವಿಂದ ಕಾರಜೋಳ, ಬಿ.ಬಿ. ಚಿಮ್ಮನಕಟ್ಟಿ, ಸಚಿವೆ ಉಮಾಶ್ರೀ, ಜಿಲ್ಲಾಧಿಕಾರಿ ಮನೋಜ್‌ ಜೈನ್‌, ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT