ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ -ಸಕ್ರಮ ಮಸೂದೆಗೆ ಒಪ್ಪಿಗೆ

Last Updated 2 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಸುವರ್ಣಸೌಧ (ಬೆಳಗಾವಿ):  ರಾಜ್ಯದಲ್ಲಿನ ನಗರ ಪ್ರದೇಶ­ಗಳ ಕಂದಾಯ ಭೂಮಿಯಲ್ಲಿ (೯೪ ಸಿಸಿ) ಅನುಮತಿ ಇಲ್ಲದೆ ನಿರ್ಮಿಸಿಕೊಂಡಿರುವ ಮನೆಗಳ ಸಕ್ರಮಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆಗೆ ವಿಧಾನಸಭೆ ಸೋಮವಾರ ಒಪ್ಪಿಗೆ ನೀಡಿತು. ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಧಾನಮಂಡಲದ ಉಭಯ ಸದನಗಳಲ್ಲಿ ಈ ಮಸೂದೆಯನ್ನು ಅಂಗೀಕರಿಸ­ಲಾ ಗಿತ್ತು. ಆದರೆ, ಇದಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದ್ದ ರಾಜ್ಯ­ಪಾಲರು ಕೆಲವು ಸ್ಪಷ್ಟನೆ ಕೋರಿ ವಾಪಸ್ ಕಳುಹಿಸಿದ್ದರು.

ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ವಿಧಾನಸಭೆಯಲ್ಲಿ ಈ ಮಸೂದೆಯನ್ನು  ಅಂಗೀಕರಿಸಲಾಯಿತು. ಮಸೂದೆ ಮಂಡಿ­ಸಿದ ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್, ‘೨೦೧೨ರ ಜನವರಿಗೂ ಮುಂಚೆ ಕಂದಾಯ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿಕೊಂಡವರಿಗೆ ಮಾತ್ರ ಇದು ಅನ್ವಯವಾಗಲಿದೆ’ ಎಂದು ಸ್ಪಷ್ಟಪಡಿಸಿದರು. ಸರ್ಕಾರಿ ಭೂಮಿ ಒತ್ತುವರಿ ಸಂಬಂಧ ವಿ.ಬಾಲ­ಸುಬ್ರ­ಮಣಿಯನ್ ನೀಡಿರುವ ವರದಿ, ಎ.ಟಿ.ರಾಮಸ್ವಾಮಿ ಅಧ್ಯ­ಕ್ಷತೆಯ ಜಂಟಿ ಸದನ ಸಮಿತಿ ವರದಿ ಹಾಗೂ ಸುಪ್ರೀಂ­ಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಈ ಮಸೂದೆ­ಯನ್ನು ರಾಜ್ಯಪಾಲರಿಗೆ ಕಳುಹಿಸಲಾಗುತ್ತಿದೆ ಎಂದರು.

ಕಂದಾಯ ಭೂಮಿಯ ೨೦/೩೦ ಅಡಿ ನಿವೇಶನದಲ್ಲಿ ನಿರ್ಮಿಸಿಕೊಂಡಿರುವ ಮನೆಗಳಿಗೆ ಮಾತ್ರ ಇದು ಅನ್ವಯ­ವಾಗಲಿದೆ. ನಿಗದಿತ ದಂಡ ವಿಧಿಸಿ ಮನೆಗಳನ್ನು ಸಕ್ರಮ­ಗೊಳಿಸಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿ­ಯಿಂದ ೧೮ ಕಿ.ಮೀ, ಬೆಳಗಾವಿ, ಗುಲ್ಬರ್ಗ, ಹುಬ್ಬಳ್ಳಿ,-ಧಾರ­ವಾಡ, ಮಂಗಳೂರು, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿ­ಯಿಂದ ೧೦ ಕಿ.ಮೀ, ನಗರ­ಸಭೆಗಳಿಂದ ೧೦ ಕಿ.ಮೀ, ಪುರಸಭೆಗಳಿಂದ ೫ ಕಿ.ಮೀ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿ­ಯಿಂದ ೩ ಕಿ.ಮೀ. ವ್ಯಾಪ್ತಿಯ ಹೊರಗೆ ಅನುಮತಿ ಇಲ್ಲದೆ ನಿರ್ಮಿಸಿಕೊಂಡಿರುವ ಮನೆಗಳಿಗೆ ಮಾತ್ರ ಅಕ್ರಮ  ಸಕ್ರಮ ಅನ್ವಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT