ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಹಣ ಸಾಗಣೆ ಮೂವರ ಬಂಧನ

Last Updated 19 ಏಪ್ರಿಲ್ 2013, 9:48 IST
ಅಕ್ಷರ ಗಾತ್ರ

ಸಿದ್ದಾಪುರ: ಕಾರಿನಲ್ಲಿ ಅನಧಿಕೃತವಾಗಿ ಸಾಗಿಸಲಾಗುತ್ತಿದ್ದ ಹಣವನ್ನು ತಾಲ್ಲೂಕಿನ ಚೂರಿಕಟ್ಟೆ ಸಮೀಪ ಗುರುವಾರ ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಿಪ್ಪನಪೇಟೆಯ ಬಸವರಾಜ ತಳಜಿರಾವ್), ರಿಪ್ಪನಪೇಟೆಯ ವಡಗೆರೆಯ ಪರಶುರಾಮ ಮುಕುಂದ ಸಿಂಗ್ , ಹೊಸನಗರ ತಮ್ಮಡಿಕೊಪ್ಪದ ಸತೀಶ ಭೈರೋಜಿರಾವ್ ಬಂಧಿತ ಆರೋಪಿಗಳಾಗಿದ್ದಾರೆ. ಚುನಾವಣೆಯ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ   ಸಾಗರ ಕಡೆಯಿಂದ ಬಂದ ಸ್ವಿಫ್ಟ್ ಕಾರನ್ನು ತಡೆದು ತಪಾಸಣೆ ನಡೆಸಿದಾಗ, ಕಾರಿನ ಡ್ಯಾಶ್ ಬೋರ್ಡ್‌ನಲ್ಲಿ ರೂ 3 ಲಕ್ಷ ಮೊತ್ತದ ನಗದು ಕಂಡು ಬಂದಿತು. ಈ ಹಣದ ಬಗ್ಗೆ ಆರೋಪಿಗಳು ಸಮರ್ಪಕ ವಿವರಣೆ ನೀಡಲಿಲ್ಲ. ಆದ್ದರಿಂದ ಕಾರು ಹಾಗೂ ಹಣವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಎಸ್‌ಐ ದಿನೇಶಕುಮಾರ ತನಿಖೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT