ತಲಘಟ್ಟಪುರ: ಇಲ್ಲಿನ ಅಗರ ಗ್ರಾ.ಪಂ.ಅಧ್ಯಕ್ಷರಾಗಿ ಬಿಜೆಪಿ ಜಿ.ಜಯಶ್ರೀ ಕೃಷ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಜಯಶ್ರೀ, `ಗ್ರಾಮಾಂತರ ಪ್ರದೇಶದ ಜನರಿಗೆ ನಾಗರಿಕ ಸೌಲಭ್ಯಗಳನ್ನು ದೊರಕಿಸಿಕೊಡಲು ಮೊದಲ ಅದ್ಯತೆ ನೀಡುವುದಾಗುವುದು~ ಎಂದು ಭರವಸೆ ನೀಡಿದರು.
ಬೆಂಗಳೂರು ನಗರ ಜಿ.ಪಂ.ಸದಸ್ಯ ಎ.ಶಿವಕುಮಾರ್, ಬೆಂಗಳೂರು ದಕ್ಷಿಣ ತಾಲ್ಲೂಕು ಆಶ್ರಯ ಸಮಿತಿ ಅಧ್ಯಕ್ಷ ಜಿ.ವಿಜಯಕುಮಾರ್, ಕಂಠೀರವ ಸ್ಟುಡಿಯೋ ಅಧ್ಯಕ್ಷ ಎಂ.ರುದ್ರೇಶ್ ಇತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.