ಪಟ್ಟಣದಲ್ಲಿ ಲ್ಯಾಂಪ್ಸ್ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡಿಕೆ ಬೆಳೆ ವಿಚಾರವಾಗಿ ಸುಪ್ರೀಂ ಕೋರ್ಟ್, 7 ಜನರ ಸಮಿತಿಯನ್ನು ನೇಮಕಗೊಳಿಸಿ, ಆ ಸಮಿತಿಯ ವರದಿ ಅನ್ವಯ ಚರ್ಚೆಗಳು ನಡೆಯುತ್ತಿದ್ದು, ಈ ಚರ್ಚೆಗೆ ಕಳೆದ ಅವಧಿಯ ರಾಜ್ಯ ಸರ್ಕಾರ ನೀಡಿರುವ ಮಾಹಿತಿ ವ್ಯತ್ಯಾಸ ಕಾರಣವಾಗಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜೊತೆಯಲ್ಲಿ ಎರೆಡೆರಡು ಬಾರಿ ಸಭೆ ನಡೆಸಲಾಗಿದ್ದು, ಧನಾತ್ಮಕ ನಿರ್ಧಾರಕ್ಕೆ ಪೂರಕವಾದ ಕಾರ್ಯವೆಸಗಲಾಗುವುದು, ಆದುದರಿಂದ ಅಡಿಕೆ ಬೆಳೆ ವಿಚಾರವಾಗಿ ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಸೃಷ್ಠಿಸಬಾರದು ಎಂದರು.