ವರ್ಷಗಳು ಕಳೆದರೂ ಅವರ ವರದಿಯನ್ನು ಸರ್ಕಾರ ಜಾರಿಗೊಳಿಸಿಲ್ಲ. ಗಾಯದ ಮೇಲೆ ಬರೆ ಎಳೆದಂತೆ ಕೆಲವು ದಿನಗಳ ಹಿಂದೆ ರೈತರಿಗೆ ಸಾಲ ಮರುಪಾವತಿ ಮಾಡಬೇಕೆಂದು ನೋಟೀಸ್ ಜಾರಿ ಮಾಡಿದ್ದಾರೆ.
ಬ್ಯಾಂಕ್ಗಳ ಈ ಕ್ರಮದಿಂದ ರೈತರು ಕಂಗಾಲಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿವೆ. ಆದರೆ ಇದುವರೆಗೂ ಯಾವುದೇ ರೈತ ಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿಲ್ಲ.
ಸಂತ್ರಸ್ತ ರೈತರಿಗಾಗಿ ಗೋರಕ್ಸಿಂಗ್ ವರದಿತಕ್ಷಣವೇ ಜಾರಿ ಮಾಡಬೇಕು, ರೈತರ ಸಾಲ ಮನ್ನಾ ಮತ್ತು ಪರ್ಯಾಯ ಬೆಳೆಗೆ ಅನುದಾನ ಬಿಡುಗಡೆ ಮಾಡಬೇಕು, ಕಾಫಿ ಬೆಳೆಯಲು ಭೂಮಿ ಸಕ್ರಮ ಮಾಡಿಕೊಡುವ ಮೂಲಕ ರೈತರು ನೆಮ್ಮದಿಯಿಂದ ಬದುಕಲು ಅವಕಾಶ ಕಲ್ಪಿಸಿಕೊಡಬೇಕು