ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡಿಕೆ: ವರ್ತಕರ ಅಘೋಷಿತ ಬಂದ್

Last Updated 15 ಫೆಬ್ರುವರಿ 2011, 16:20 IST
ಅಕ್ಷರ ಗಾತ್ರ

ಶಿವಮೊಗ್ಗ: ಅಡಿಕೆ ಧಾರಣೆ ಕುಸಿದ ಹಿನ್ನೆಲೆಯಲ್ಲಿ ಮಂಗಳವಾರವೂ ಮಾರುಕಟ್ಟೆಯಲ್ಲಿ ಅಘೋಷಿತ ಬಂದ್ ಆಚರಿಸಲಾಯಿತು. ಯಾವುದೇ ಅಡಿಕೆ ಖರೀದಿಸದಂತೆ ದೆಹಲಿ, ಮಧ್ಯಪ್ರದೇಶಗಳಿಂದ ಸೂಚನೆ ಬಂದಿದೆ. ಅಲ್ಲದೇ, ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಅನಿರ್ದಿಷ್ಟ ಅವಧಿಯವರೆಗೆ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಎಪಿಎಂಸಿ ಅಡಿಕೆ ವರ್ತಕ ಮಂಜುನಾಥ್ ತಿಳಿಸಿದ್ದಾರೆ.

ಗುಟ್ಕಾ ನಿಷೇಧದ ಕುರಿತಂತೆ ಕ್ಯಾಂಪ್ಕೋ ಮತ್ತಿತರ ಸಹಕಾರ ಸಂಸ್ಥೆಗಳು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಫೆ. 17ರಂದು ನಡೆಯಲಿದೆ.  ಸರ್ಕಾರ ಭರವಸೆ ನೀಡಿದ್ದಂತೆ ಕೆಂಪು ಅಡಿಕೆಗೆ ಇನ್ನೆರಡು ದಿವಸದಲ್ಲಿ ಬೆಂಬಲ ಬೆಲೆ ಘೋಷಣೆಯಾಗಬಹುದು ಎಂದು ಮ್ಯಾಮ್‌ಕೋಸ್ ಉಪಾಧ್ಯಕ್ಷ ನರಸಿಂಹನಾಯಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT