ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣ್ಣಾ ಹಜಾರೆ ನಿರಶನಕ್ಕೆ ಸ್ಥಳ ನಿಗದಿ

Last Updated 10 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಪ್ರಬಲ ಲೋಕಪಾಲ ಮಸೂದೆಗೆ ಆಗ್ರಹಿಸಿ ಇದೇ 16ರಿಂದ ಉಪವಾಸ ಸತ್ಯಾಗ್ರಹ ನಡೆಸಲು ಉದ್ದೇಶಿಸಿರುವ ಅಣ್ಣಾ ಹಜಾರೆ ಹಾಗೂ ಅವರ ತಂಡಕ್ಕೆ ದೆಹಲಿ ಪೊಲೀಸರು ಫಿರೋಜ್ ಷಾ ಕೋಟ್ಲಾ ಮೈದಾನಕ್ಕೆ ಹೊಂದಿಕೊಂಡಿರುವ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಉದ್ಯಾನವನ್ನು ನಿಗದಿಪಡಿಸಿದ್ದಾರೆ.

ಮೈದಾನವನ್ನು ಪರಿಶೀಲಿಸಿದ ಬಳಿಕವಷ್ಟೇ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಅಣ್ಣಾ ತಂಡ ಇದಕ್ಕೆ ಪ್ರತಿಕ್ರಿಯಿಸಿದೆ.

ಹೋರಾಟ ಬಿಡೆವು: ಲೋಕಪಾಲ ಮಸೂದೆ ವಿಷಯದಲ್ಲಿ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಅಣ್ಣಾ, ನಾವು ಪ್ರಸ್ತಾಪಿಸಿರುವ ಎಲ್ಲ ಅಂಶಗಳೂ ಈ ಮಸೂದೆ ವ್ಯಾಪ್ತಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

`ಸರ್ಕಾರ ಸಂಸತ್‌ನಲ್ಲಿ ಮಂಡಿಸಿರುವ ಕರಡು ಮಸೂದೆಯಲ್ಲಿ ಏನೂ ಇಲ್ಲ. ಇದೊಂದು ಕಣ್ಣೊರೆಸುವ ತಂತ್ರ. ಭ್ರಷ್ಟಾಚಾರದ ವಿರುದ್ಧ ಹೋರಾಡಲು ನಮ್ಮ ಬಳಿ ಅಸ್ತ್ರವಿದೆ ಎನ್ನುವುದನ್ನು ಜನರಿಗೆ ತಿಳಿಸುವುದಕ್ಕೆ ಇದೊಂದು ನೆಪವಾಗಿದೆ ಅಷ್ಟೆ~ ಎಂದು ದೂರಿದ್ದಾರೆ.

ಕಾಂಗ್ರೆಸ್ ಸವಾಲು: ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿರುವ ಅಣ್ಣಾ ಮತ್ತು ಅವರ ತಂಡದ ಸದಸ್ಯರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಕಾಂಗ್ರೆಸ್ ಸವಾಲೆಸೆದಿದೆ.

`ಚುನಾವಣೆಯಲ್ಲಿ ಗೆದ್ದು ಸಂಸತ್ ಪ್ರವೇಶಿಸಿ ತಮ್ಮ ಅಭಿಪ್ರಾಯಗಳಿಗೆ ಅನುಗುಣವಾಗಿ ಲೋಕಪಾಲ ಮಸೂದೆಯನ್ನು ಅಂಗೀಕರಿಸಲಿ. ಅದನ್ನು ಬಿಟ್ಟು ಉಪವಾಸ ಕುಳಿತುಕೊಳ್ಳುವುದರಿಂದ ಏನನ್ನೂ ಸಾಧಿಸಿದಂತಾಗುವುದಿಲ್ಲ~ ಎಂದು ಪಕ್ಷದ ಧುರೀಣ ರಶೀದ್ ಅಲ್ವಿ ಸಲಹೆ ನೀಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT