ಕೊಪ್ಪಳ: ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಮಹಾಪೀಠವು ನೀಡುವ 2013ನೇ ಸಾಲಿನ `ಬಸವ ಕೃಷಿ' ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಆಯ್ಕೆ ಮಾಡಲಾಗಿದೆ. ಇದು 50 ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದರು. ಜ. 16ರಂದು ಕೂಡಲಸಂಗಮದಲ್ಲಿ ನಡೆಯುವ ಕೃಷಿ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಕೃಷಿಯಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಪೀಠವು ಕಳೆದ ವರ್ಷದಿಂದ ಈ ಪ್ರಶಸ್ತಿ ಕೊಡುತ್ತಿದ್ದು ಕಳೆದ ವರ್ಷ ಪ್ರಶಸ್ತಿಯನ್ನು ಜಲತಜ್ಞ ಖ್ಯಾತಿಯ, ರಾಜಸ್ತಾನದ ರಾಜೇಂದ್ರಸಿಂಗ್ ಅವರಿಗೆ ನೀಡಲಾಗಿತ್ತು.