ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ತಿಬೆಲೆ: ಗಣೇಶ ಮೂರ್ತಿವಿಸರ್ಜನೆ ವೇಳೆ ಬಾಲಕ ಸಾವು

Last Updated 15 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಹೊಸಕೋಟೆ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ದಿನೇಶ್‌ (17) ಎಂಬ ಬಾಲಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸೂಲಿಬೆಲೆಯ ವಿವೇಕಾನಂದ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ದಿನೇಶ್‌, ಸ್ನೇಹಿತರ ಜೊತೆ ಗ್ರಾಮದಲ್ಲಿನ ಗಣೇಶ ಮೂರ್ತಿ ವಿಸರ್ಜನೆಗೆ ತೆರೆಳಿದ್ದ. ಗ್ರಾಮಕ್ಕೆ ಹೊಂದಿಕೊಂಡಿರುವ ಸೂಲಿಬೆಲೆ ಕೆರೆಯಲ್ಲಿ ಇಟ್ಟಿಗೆ ಗೂಡಿನ  ಮಣ್ಣಿಗಾಗಿ ದೊಡ್ಡಗಾತ್ರದ ಹಳ್ಳಗಳನ್ನು ತೋಡ ಲಾಗಿದೆ.

ಇತ್ತೀಚಿನ ಮಳೆಯಿಂದಾಗಿ ಅವು ತುಂಬಿಕೊಂಡಿದ್ದು, ಹಳ್ಳಗಳಿರು ವುದು ಗೊತ್ತಾಗುತ್ತಿರಲಿಲ್ಲ. ಹೀಗಾಗಿ ದಿನೇಶ್‌, ಹಳ್ಳವೊಂದರಲ್ಲಿ ಕಾಲಿಟ್ಟು ಮುಳುಗಿದ್ದಾನೆ. ಸೂಲಿಬೆಲೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT