ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ನಾನು ಯಾವುದೇ ತಪ್ಪು ಮಾಡಿಲ್ಲ, ಈ ಆರೋಪ ರಾಜಕೀಯ ದುರುದ್ದೇಶದಿಂದ ಕೂಡಿದೆ. ನ್ಯಾಯಸಮ್ಮತ ತನಿಖೆ ನಡೆಯುವ ಸಲುವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಾಬುಲಾಲ್ ತಿಳಿಸಿದರು.
ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು ಎಂಬ ಸದುದ್ದೇಶದಿಂದ ರಾಜೀನಾಮೆ ಸಲ್ಲಿಸಿದ್ದೇನೆ. ತನಿಖೆಯ ಬಳಿಕ ನಿರಪರಾಧಿಯಾಗಿ ಹೊರಬರಲಿದ್ದೇನೆ ಎಂಬ ವಿಶ್ವಾಸವನ್ನು ಬಾಬುಲಾಲ್ ವ್ಯಕ್ತಪಡಿಸಿದರು.
ಸೆಪ್ಟೆಂಬರ್ 11 ರಂದು ಸರ್ಕಾರಿ ಬಂಗಲೆಯಲ್ಲಿ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಬಾಬುಲಾಲ್ ಎದುರಿಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.