ಮುಂಬೈ (ಪಿಟಿಐ): ಪತ್ರಿಕಾ ಛಾಯಾಗ್ರಾಹಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳನ್ನು ಇಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಸೆಪ್ಟೆಂಬರ್ 19ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಾಲ್ವರು ಆರೋಪಿಗಳಾದ ಶಿರಾಜ್ ರೆಹಮಾನ್ ಖಾನ್, ವಿಜಯ್ ಜಾಧವ್, ಖಾಸಿಂ ಬಂಗಾಳಿ ಮತ್ತು ಸಲೀಂ ಅನ್ಸಾರಿಯನ್ನು ಮ್ಯಾಜಿಸ್ಟ್ರೇಟ್ ಯು.ಎಂ. ಪಡ್ವಾಡ್ ಅವರು, ಗುರುವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.