ಭುವನೇಶ್ವರ (ಪಿಟಿಐ): ಒಡಿಶಾದ ಪಿಪ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಕ್ಷಿಸಿದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಒಡಿಶಾದ ಕೃಷಿ ಸಚಿವ ಪ್ರದೀಪ್ ಮಹಾರಥಿ ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದ ಮಹಾರಥಿ, ನೈತಿಕತೆಯ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ತಿಂಗಳು ಪಂಚಾಯತ್ ಚುನಾವಣೆ ನಡೆಯುವುದರಿಂದ ಆಡಳಿತಾರೂಢ ಬಿಜೆಡಿ ಮುಖ ಉಳಿಸಿಕೊಳ್ಳಲು ಈ ಕ್ರಮ ಜರುಗಿಸಿದೆ.