ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶೆ ಉಷಾ ಮೆಹ್ರಾ ನೇತೃತ್ವದ ನ್ಯಾಯಾಂಗ ಆಯೋಗವು ಪ್ರಕರಣದ ತನಿಖೆ ನಡೆಸಲಿದೆ ಎಂದು ಹಣಕಾಸು ಸಚಿವ ಪಿ. ಚಿದಂಬರಂ ಅವರು ಸಂಪುಟ ಸಭೆ ಬಳಿಕ ತಿಳಿಸಿದರು.
ದೆಹಲಿಯ ಸಮೂಹಿಕ ಅತ್ಯಾಚಾರ ಪ್ರಕರಣ ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದಿರುವ ಚಿದಂಬರಂ ಅವರು, ಅತ್ಯಾಚಾರ ಪ್ರಕರಣಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಮಹಿಳೆಯರ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.