ಬೆಂಗಳೂರು: ಬೇಲೆಕೇರಿ ಬಂದರಿನ ಮೂಲಕ ಅದಿರು ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.
ಎಬ್.ಬಿ ಲಾಜಿಸ್ಟಿಕ್ಸ್ನ ಕೆ.ಜನಾರ್ದನ ರೆಡ್ಡಿ, ಈಗಲ್ ಟ್ರೇಡರ್ಸ್ನ ಕುರುಬ ನಾಗರಾಜ್ ಮತ್ತು ಹೊಸಕೋಟೆ ಶಾಸಕ ಆನಂದ್ ಸಿಂಗ್ ಸಂಬಂಧಿ ಪ್ರವೀಣ್ ಸಿಂಗ್ ಬಂಧಿತರು.
ಕಾರವಾರ ಶಾಸಕ ಸತೀಶ ಸೈಲ್ ಒಡೆತನದ ಶ್ರೀಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪೆನಿಗೆ ಅಕ್ರಮವಾಗಿ ಅದಿರು ಪೂರೈಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಆರೋಪಿಗಳನ್ನು ಎರಡು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಲಾಗಿದೆ.