ತಿಪಟೂರು: ರೈತರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹಾರ ರೂಪಿಸುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ಹಳ್ಳಿಗಳ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಎಪಿಎಂಸಿ ಆವರಣದಲ್ಲಿ ಸೋಮವಾರ ನಡೆದ ರೈತರ ದಿನಾಚರಣೆಯಲ್ಲಿ ಮಾತನಾಡಿ, ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದೊಯ್ದು ರೈತರ ಮನೆ ಬಾಗಿಲಲ್ಲೇ ಪರಿಹರಿಸುವ ಪ್ರಯತ್ನ ನಡೆಯಲಿದೆ. ಫೆಬ್ರುವರಿಯಿಂದ ಈ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.
ಎಪಿಎಂಸಿ ಅಧ್ಯಕ್ಷ ಮಾದಿಹಳ್ಳಿ ಪ್ರಕಾಶ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಎಸ್.ದೇವರಾಜ್, ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ಸುಜಿತ್, ವಿಷಯ ತಜ್ಞ ಡಾ.ಶ್ರೀನಿವಾಸ್, ತಾ.ಪಂ. ಮಾಜಿ ಅಧ್ಯಕ್ಷೆ ಪುಷ್ಪಾ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಕೆ.ಎಸ್.ಸದಾಶಿವಯ್ಯ ಮಾತನಾಡಿದರು.
ಜಿ.ಪಂ.ಸದಸ್ಯೆ ರಾಧಾ ನಾರಾಯಣಗೌಡ, ತಾ.ಪಂ.ಪ್ರಭಾರ ಅಧ್ಯಕ್ಷ ರಾಜು, ಎಪಿಎಂಸಿ ಉಪಾಧ್ಯಕ್ಷ ರಮೇಶ್, ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಸುರೇಶ್, ಕಾರ್ಯದರ್ಶಿ ನ್ಯಾಮಗೌಡ, ತಹಶೀಲ್ದಾರ್ ಮಂಜುನಾಥ್, ವಿವಿಧ ಇಲಾಖೆ ಅಧಿಕಾರಿಗಳು, ತಾ.ಪಂ. ಸದಸ್ಯರು ಇದ್ದರು.
ರೈತರಾದ ಸದಾಶಿವಯ್ಯ, ಓಂಕಾರಪ್ಪ, ಹೇಮಣ್ಣ, ನೊಣವಿನಕೆರೆ ಸ್ವಾಮಿ, ಜಯದೇವಪ್ಪ ಅವರಿಗೆ ತಾಲ್ಲೂಕು ಕೃಷಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.