ಹಿರಿಯ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಕಾರ್ಯಕ್ರಮ ಉದ್ಘಾಟಿಸಿ, ‘ಸೋಮಶೇಖರ್ ವಿದ್ಯಾ ರ್ಥಿಯಾಗಿದ್ದಾಗ ಜನಪ್ರಿಯ ರಾಗಿದ್ದರು. ಬಡವರ ಸೇವೆ ಮಾಡುವ ಮೂಲಕ ಅಧಿಕಾರಿಯಾಗಿಯೂ ಜನಪ್ರಿಯರಾಗಿದ್ದಾರೆ. ಅವರು ಜನಪ್ರಿಯ ಆಡಳಿತ ಗಾರ’ ಎಂದರು.
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಹಿರಿಯ ಕವಿ ಡಾ.ಕೆ.ಎಸ್. ನಿಸಾರ್ ಅಹಮದ್ ಅಭಿನಂದನಾ ಛಾಯಾಚಿತ್ರ ಸಂಪುಟ ‘ಚಿತ್ರ ವಿಹಾರ’ ಬಿಡುಗಡೆ ಮಾಡಿದರು. ನಿವೃತ್ತ ನ್ಯಾಯಮೂರ್ತಿಗಳಾದ ಶಿವರಾಜ ವಿ.ಪಾಟೀಲ್, ವಿ.ಎಸ್.ಮಳಿಮಠ, ರಾಜ್ಯಸಭಾ ಸದಸ್ಯೆ ಬಿ.ಜಯಶ್ರೀ, ಸಂಸ್ಕೃತ ವಿವಿಯ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್ ಉಪಸ್ಥಿತರಿದ್ದರು.