ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳಿಗೆ ತಲುಪದ ಆದೇಶ

ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅಸಮಾಧಾನ
Last Updated 4 ಜನವರಿ 2014, 20:00 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌­ನಲ್ಲಿ ಪ್ರಕಟಿಸಿದ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೆಳಹಂತದ ಅಧಿಕಾರಿಗಳಿಗೆ ಇನ್ನೂ ಆದೇಶ ತಲುಪಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋ­ಜಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯ­ನಿರ್ವಹಣಾ ಅಧಿಕಾರಿಗಳ ಸಮಾ­ವೇಶ ಉದ್ಘಾಟಿಸಿ ಅವರು ಮಾತನಾಡಿ, ಬಜೆಟ್‌ನಲ್ಲಿ ಘೋಷಿಸಿದ ಹಲವು ಕಾರ್ಯಕ್ರಮ­ಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಆದೇಶವೇ ಹೋಗಿಲ್ಲ ಎಂಬ ಮಾಹಿತಿ ತಮಗೆ ಲಭ್ಯವಾಗಿದೆ. ಕೃಷಿ ಇಲಾಖೆಗೆ ಸಂಬಂಧಿ­ಸಿದ ‘ಸ್ವಬೀಜಾಭಿವೃದ್ಧಿ ಯೋಜನೆ’ ಕುರಿತು ವಿಚಾರಿಸಿದಾಗ ಇದು ಗಮನಕ್ಕೆ ಬಂತು ಎಂದರು.

‘ಹಲವು ಕಾರ್ಯಕ್ರಮಗಳ ವಿಷಯದಲ್ಲಿ ಇದೇ ರೀತಿ ಆಗಿದೆ. ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಕಾರ್ಯಕ್ರಮದ ವಿಚಾರದಲ್ಲಿ ಹೀಗೆ ಆಗಿತ್ತು. ಅಧಿಕಾರಿಗಳನ್ನು ವಿಚಾರಿಸಿದಾಗ ಅವರಿಗೆ ಮಾಹಿತಿಯೇ ಇರಲಿಲ್ಲ. ಈ ಕುರಿತು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದ ನಾನು, ತಕ್ಷಣವೇ ಕೆಳಹಂತದ ಅಧಿಕಾರಿಗಳಿಗೆ ಆದೇಶ ನೀಡುವ ಮತ್ತು ಮಾಹಿತಿ ಒದಗಿಸುವ ವ್ಯವಸ್ಥೆ ಮಾಡುವಂತೆ ಕೋರಿದ್ದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT