ಅಹಮದ್ನಗರ (ಮಹಾರಾಷ್ಟ್ರ) (ಪಿಟಿಐ): ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ಜನಲೋಕಪಾಲ್ ಮಸೂದೆಗೆ ಅಂಗೀಕಾರ ನೀಡಬೇಕು ಎಂದು ಆಗ್ರಹಿಸಿ ಅಧಿವೇಶನದ ಮೊದಲ ದಿನ ನವದೆಹಲಿಯಲ್ಲಿ ‘ಸತ್ಯಾಗ್ರಹ’ ನಡೆಸಲಾಗುವುದು ಎಂದು
ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಶುಕ್ರವಾರ ಹೇಳಿದ್ದಾರೆ.
ಕಳೆದ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಅಂಗೀಕರಿಸಲಾಗುವುದು ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭರವಸೆ ನೀಡಿದ್ದರು. ಆದರೆ, ಅವರು ನುಡಿದಂತೆ ನಡೆಯಲಿಲ್ಲ ಎಂದು ಹಜಾರೆ ತಿಳಿಸಿದ್ದಾರೆ.