ಮೋದಿ ಭಾರತದ ಪ್ರಧಾನಿಯಾದರೆ ನಾನು ಭಾರತದಲ್ಲಿ ಇರಲಾರೆ ಎಂಬ ಅನಂತಮೂರ್ತಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಯನೂರು ಮಂಜುನಾಥ್, ಅನಂತಮೂರ್ತಿ ಅವರನ್ನು ಪೂನಂ ಪಾಂಡೆಗೆ ಹೋಲಿಸುವ ಮೂಲಕ ಲೇವಡಿ ಮಾಡಿದ್ದಾರೆ.
ಭಾರತ ವಿಶ್ವ ಕಪ್ ಗೆದ್ದಾಗ ಸಾರ್ವಜನಿಕವಾಗಿ ಬೆತ್ತಲಾಗುತ್ತೇನೆ ಎಂದು ಪೂನಂ ಪಾಂಡೆ ಹೇಳಿಕೆ ನೀಡಿದ್ದರು. ಅವರಂತೆಯೇ ಅನಂತಮೂರ್ತಿ ಕೆಟ್ಟ ಹೇಳಿಕೆಗಳನ್ನು ನೀಡುವ ಮೂಲಕ ಬಿಟ್ಟಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಆಯನೂರು ಕಿಡಿಕಾರಿದ್ದಾರೆ.