ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಗತ್ಯ ಗೊಂದಲ ಸೃಷ್ಟಿ: ಡಿವಿಎಸ್

Last Updated 20 ಫೆಬ್ರುವರಿ 2012, 20:20 IST
ಅಕ್ಷರ ಗಾತ್ರ

ಬೆಂಗಳೂರು: `ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಬಲಿಗರು ನನ್ನ ಮತ್ತು ಯಡಿಯೂರಪ್ಪ ಮಧ್ಯೆ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.

`ನನ್ನ ಮತ್ತು ಅವರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ. ಮೂರು ದಿನಗಳ ಹಿಂದೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ~ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದರು.

`ಭೇಟಿ ಸಂದರ್ಭದಲ್ಲಿ ಯಾವುದಾದರೂ ಸ್ಥಾನಮಾನ ಕಲ್ಪಿಸಿಕೊಡುವ ಬಗ್ಗೆ ಅವರು ನನ್ನೊಂದಿಗೆ ಪ್ರಸ್ತಾಪಿಸಿದರು. ಈ ವಿಷಯ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂಬುದಾಗಿ ಮನವರಿಕೆ ಮಾಡಿಕೊಟ್ಟೆ. ಇದಕ್ಕೆ ಅವರೂ ಸಮ್ಮತಿಸಿದರು. ಇಷ್ಟಾದರೂ ಅವರ ಬೆಂಬಲಿಗರು ಪದೇ ಪದೇ ಹೇಳಿಕೆಗಳನ್ನು ನೀಡುವ ಮೂಲಕ ಗೊಂದಲವನ್ನುಂಟು ಮಾಡುತ್ತಿದ್ದಾರೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT