ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಗತ್ಯ ವಿವಾದ: ಉಮೇಶ ಕತ್ತಿ ಸ್ಪಷ್ಟನೆ

Last Updated 20 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ~ ಎಂದು ಕೃಷಿ ಸಚಿವ ಉಮೇಶ ವಿ.ಕತ್ತಿ ಶನಿವಾರ ಇಲ್ಲಿ ಸ್ಪಷ್ಟಪಡಿಸಿದರು.

`ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಕುಟುಂಬದಿಂದ ಬಂದವನು ನಾನು. ರಾಜ್ಯ ವಿಭಜನೆಯ ಹೇಳಿಕೆ ನನ್ನಿಂದ ಬಂದಿಲ್ಲ~ ಎಂದು ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.  `2020ರ ವೇಳೆಗೆ ಸಣ್ಣ ರಾಜ್ಯಗಳ ರಚನೆ ಆಗಬಹುದು. ಆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಕೂಡ ಪ್ರತ್ಯೇಕ ರಾಜ್ಯವಾಗುವ ಅವಕಾಶ ಇದೆ ಎಂದು ಹೇಳಿದ್ದೆ.

ಇದರ ಹೊರತಾಗಿ ಬೇರೆ ಏನೂ ಹೇಳಿಲ್ಲ. ಅನಗತ್ಯವಾಗಿ ವಿವಾದ ಸೃಷ್ಟಿಸಲಾಗಿದೆ~ ಎಂದು ಆಕ್ಷೇಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT