ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹಗೊಳಿಸಲು ಹಿಂದೇಟು ಏಕೆ?

Last Updated 9 ಫೆಬ್ರುವರಿ 2012, 20:10 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದ್ದಕ್ಕೆ 16 ಶಾಸಕರನ್ನು ಕಾರಣವಿಲ್ಲದೆ ಅನರ್ಹಗೊಳಿಸಲಾಗಿತ್ತು. ಈಗ ಸದನದಲ್ಲಿ `ಬ್ಲೂ ಫಿಲಂ~ ವೀಕ್ಷಿಸಿದವರನ್ನು ಅನರ್ಹಗೊಳಿಸಲು ಹಿಂದೇಟು ಏಕೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕಿ ಮೋಟಮ್ಮ ಅವರು ಬಿಜೆಪಿಯನ್ನು ಪ್ರಶ್ನಿಸಿದರು.

ಗುರುವಾರ ಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಆದ ಬಳಿಕ ಮೊಗಸಾಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, `ಬಿಜೆಪಿಯ ಢೋಂಗಿತನ ಈ ಪ್ರಕರಣದಲ್ಲಿ ಬಯಲಾಗಿದೆ. ದೇಶದ ಸಂಸ್ಕೃತಿ ರಕ್ಷಿಸುವ ವಕ್ತಾರರಂತೆ ಬಿಂಬಿಸಿಕೊಳ್ಳುವ ಸಂಘ ಪರಿವಾರದ ಗೋಸುಂಬೆತನವೂ ಬಹಿರಂಗವಾಗಿದೆ. ಈ ಶಾಸಕರನ್ನು ಅನರ್ಹಗೊಳಿಸದೇ ಇದ್ದರೆ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ~ ಎಂದರು.

`ವಿಧಾನಸಭೆಯಲ್ಲಿ ನಡೆದ ಅಹಿತಕರ ಘಟನೆ ಕುರಿತು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆಯಬೇಕಿತ್ತು. ಈ ಸದನದ ಮೂಲಕ ರಾಜ್ಯದ ಜನತೆಗೆ ಸಂದೇಶವೊಂದು ರವಾನೆ ಆಗಬೇಕಿತ್ತು. ಆದರೆ, ಸರ್ಕಾರದ ಮೊಂಡುತನದಿಂದ ಅದಕ್ಕೆ ಅವಕಾಶ ದೊರೆಯಲಿಲ್ಲ. ತನಿಖೆಯ ಹೆಸರಿನಲ್ಲಿ ಕಣ್ಣೊರೆಸುವ ಪ್ರಯತ್ನ ಸಲ್ಲದು~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT