ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಬಿಡುಗಡೆ ಆದೇಶ: ಹೊರಟ್ಟಿ ಪಾದಯಾತ್ರೆ ರದ್ದು

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಧಾರವಾಡ: ಅನುದಾನ ಬಿಡುಗಡೆ ಕುರಿತು ಸರ್ಕಾರದ ಆದೇಶ ಗುರುವಾರ ಇಲ್ಲಿನ ಶಿಕ್ಷಕರಿಗೆ ತಲುಪಿದ್ದು, ಇದರಿಂದಾಗಿ ಅನುದಾನಕ್ಕೆ ಆಗ್ರಹಿಸಿ ಬುಧವಾರ ಮಾಜಿ ಸಚಿವ ಹೊರಟ್ಟಿ ನೇತೃತ್ವದಲ್ಲಿ ಆರಂಭಿಸಿದ್ದ `ಬೆಂಗಳೂರು ಚಲೋ~ ಪಾದಯಾತ್ರೆ ರದ್ದುಗೊಂಡಿದೆ.

ಅನುದಾನ ಬಿಡುಗಡೆಗಾಗಿ ಆಗ್ರಹಿಸಿ 71 ದಿನಗಳಿಂದ ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಕರ ಹೋರಾಟಕ್ಕೆ ತೆರೆ ಬಿದ್ದಂತಾಗಿದೆ. 

ಧರಣಿ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಪಣ ಜೈನ್ ಭೇಟಿ ನೀಡಿ, ಶಿಕ್ಷಕರಿಗೆ ಹಣ್ಣಿನ ರಸ ಕುಡಿಸಿ, ಆದೇಶದ ಪ್ರತಿಯನ್ನು  ನೀಡಿದರು. ಧಾರವಾಡದಿಂದ ವರೂರುವರೆಗೆ ಸುಮಾರು 38 ಕಿ.ಮೀ. ದೂರ ಕ್ರಮಿಸಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿ ಬಸವರಾಜ ಹೊರಟ್ಟಿ ವಾಪಸು ಬಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT